Featured

ಕಾಪು: ಡೀಸೆಲ್‌ – ಪೆಟ್ರೋಲ್ ದರ ಏರಿಕೆ : ಯುಪಿಎ ಸರಕಾರದ ಅವಧಿಯಲ್ಲಿ ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ : ವಿನಯ್ ಕುಮಾರ್ ಸೊರಕೆ – Vishwanews24

ಕಾಪು: ಡೀಸೆಲ್‌ – ಪೆಟ್ರೋಲ್ ದರ ಏರಿಕೆ : ಯುಪಿಎ ಸರಕಾರದ ಅವಧಿಯಲ್ಲಿ ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ : ವಿನಯ್ ಕುಮಾರ್ ಸೊರಕೆ – Vishwanews24

ಕಾಪು: ಡೀಸೆಲ್‌ – ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನೆ ನಡೆಯಿತು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ಯಾವ ಮುಲಾಜಿಯಿಲ್ಲದೆ ಪೆಟ್ರೋಲ್ – ಡೀಸೆಲ್, ಗ್ಯಾಸ್, ವಿದ್ಯುತ್ ದರ ಏರಿಸುವ ಮುಖಾಂತರ ಗಾಯದ ಮೇಲೆ ಬರೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ. ಯುಪಿಎ ಸರಕಾರದ ಅವಧಿಯಲ್ಲಿ ಪೈಸೆಯ ಬೆಲೆ ಏರಿಕೆಯಾದಾಗ ಗರಿ ಗರಿ ಸೀರೆ ಹಾಕಿಕೊಂಡು ರಸ್ತೆಯಲ್ಲಿ ಉರುಳಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರ ಕೇವಲ ಪೆಟ್ರೋಲ್- ಡೀಸೆಲ್ ದರ ಏರಿಸದೇ, ದಿನಂಪ್ರತಿ ಬಳಸುವ ಎಲ್ಲಾ ಸಾಮಾಗ್ರಿಗಳ ದರ ಏರಿಸುವ ಮುಖಾಂತರ ಜನರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕೆಪಿಸಿಸಿ ಮುಖಂಡರಾದ ಎಂ.ಎ. ಗಫೂರ್, ನವೀನ್ ಚಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೈನ್, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಮೊದಲಾದವರು ಮಾತನಾಡಿದರು.

ಪಕ್ಷದ ಮುಖಂಡರಾದ ಗೀತಾ ವಾಗ್ಲೆ, ಪ್ರಶಾಂತ್ ಜತ್ತನ್ನ, ಮಹಮ್ಮದ್ ಫಾರೂಖ್, ರಮೀಜ್ ಹುಸೇನ್, ಸೌರಬ್ ಬಲ್ಲಾಳ್, ವೈ. ಸುಕುಮಾರ್, ಶರ್ಫುದ್ದೀನ್ ಶೇಖ್, ವೈ. ಸುಧೀರ್ ಕುಮಾರ್, ಯು.ಸಿ. ಶೇಖಬ್ಬ, ಮಹಮ್ಮದ್ ಸಾಧಿಕ್ ದೀನಾರ್, ನವೀನ್ ಎನ್. ಶೆಟ್ಟಿ, ಶಶಿಧರ್ ಶೆಟ್ಟಿ, ಶೇಖರ್ ಕೋಟ್ಯಾನ್, ಅಬ್ದುಲ್ ಅಜೀಜ್, ಶಿವಾಜಿ ಸುವರ್ಣ, ಕೇಶವ ಹೆಜಮಾಡಿ, ಹಸನಬ್ಬ ಶೇಖ್, ಹರೀಶ್ ನಾಯಕ್, ಅಮೀರುದ್ದೀನ್ ಕಾಪು, ಪ್ರಭಾ ಬಿ. ಶೆಟ್ಟಿ, ದಯಾನಂದ ಬಂಗೇರ, ಮಾಧವ ಪಾಲನ್, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಕಟಪಾಡಿಯಲ್ಲಿ ಪ್ರತಿಭಟನೆ: ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಕಟಪಾಡಿ ಜಂಕ್ಷನ್ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಡೀಸಲ್, ಗ್ಯಾಸ್ ಬೆಲೆ ಏರಿಕೆ ವಿರುದ್ಧ ಸೌಟು, ಬಟ್ಟಲು, ಲಟ್ಟಣಿಗೆ ಹಿಡಿದು ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ ಶೆಟ್ಟಿ, ಪ್ರಮುಖರಾದ ಆಗ್ನೆಸ್ ಡೇಸ್, ಸುಗುಣ, ಆಶಾ ಅಂಚನ್, ಪ್ಲಾವಿಯ, ಸಬಿತ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago