ಕಾಪು: ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ, ಸ್ಥಳೀಯ ಮೀನುಗಾರ ದೋಣಿ ಮುಗುಚಿ ಇಬ್ಬರು ಮೀನುಗಾರರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.
ಕಳೆದ ಕೆಲವು ದಿನಗಳಿಂದ ತಮಿಳುನಾಡು ಮೂಲದ ಮೀನುಗಾರರು ಅಕ್ರಮ ಅಜ್ಞರು ಮೀನುಗಾರಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮೀನುಗಾರರು ಸಣ್ಣ ದೋಣಿಯಲ್ಲಿ ತೆರಳಿ ತಮಿಳುನಾಡು ಮೂಲದ ಮೀನುಗಾರರ ಜೊತೆ ಮೀನುಗಾರಿಕೆ ಮಾಡದಂತೆ ಮನವಿ ಮಾಡಲು ಮುಂದಾಗಿದ್ದರು.
ಇದನ್ನೂ ಓದಿ:
ಈ ವೇಳೆ ತಮಿಳುನಾಡಿನ ದೊಡ್ಡ ದೋಣಿಯನ್ನು ಸ್ಥಳೀಯ ಮೀನುಗಾರರ ಸಣ್ಣ ದೋಣಿಗೆ ಉದ್ದೇಶಪೂರ್ವಕ ಡಿಕ್ಕಿ ಹೊಡೆಸಿದ್ದಾರೆ.ಈ ವೇಳೆ ಕಾಪು ಮೂಲದ ದೋಣಿ ಮುಗುಚಿ ಬಿದ್ದು ಇಬ್ಬರು ಮೀನುಗಾರರು ನೀರಿಗೆ ಬಿದ್ದಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಮೀನುಗಾರ ನಾಪತ್ತೆ ಯಾಗಿದ್ದಾನೆ.
ಘಟನೆ ಬಳಿಕ ತಮಿಳುನಾಡು ಮೂಲದ ಮೀನುಗಾರರು ಮಲ್ಪೆಯತ್ತ ಪಲಾಯನ ಮಾಡಿದ್ದಾಗಿ ಸ್ಥಳೀಯರು ದೂರಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…