Featured

ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿ , ಲಕ್ಷಾಂತರ ರೂ. ನಷ್ಟ – Vishwanews24

ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿ , ಲಕ್ಷಾಂತರ ರೂ.  ನಷ್ಟ

ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟವುಂಟಾಗಿದೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಮತ್ತೆ ನೆರೆಯ ಭೀತಿ ಎದುರಾಗಿದೆ. ಇನ್ನಂಜೆ – ಮರ್ಕೋಡಿ ಹೊಳೆ ಬಳಿ, ಕಾಪು ಜನಾರ್ದನ ದೇವಸ್ಥಾನದ ಬಳಿ, ಮಲ್ಲಾರು – ಮೂಳೂರು – ಬೆಳಪು ಬೈಲ್, ಉಳಿಯಾರಗೋಳಿ ಕೈಪುಂಜಾಲು ಬೈಲು ಮುಳುಗಡೆಯಾಗಿದೆ.

ಕಳೆದ ಎರಡು ವಾರಗಳ ಹಿಂದೆ ನಿರಂತರ ಮಳೆಯಿಂದಾಗಿ ನೆರೆ ಕಂಡು ಬಂದಿದ್ದ ತಗ್ಗು ಪ್ರದೇಶಗಳಲ್ಲಿ ನೆರೆ ಇಳಿಮುಖವಾದ ಬಳಿಕ ಭತ್ತದ ಕೃಷಿ ಕೆಲಸಗಳು ಬಿರುಸಿನಿಂದ ನಡೆದಿದ್ದವು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿದ ಪರಿಣಾಮ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ನೂರಾರು ಹೆಕ್ಟೇರ್ ಕೃಷಿ ಗದ್ದೆಗಳಲ್ಲಿ ನಡೆಸಲಾಗಿರುವ ಭತ್ತದ ನಾಟಿ ಕೊಳೆಯುವ ಭೀತಿ ಎದುರಾಗಿದೆ. ಕೃಷಿ ಕಾರ್ಯಕ್ಕೆ ಕೆಲಸದವರ ಕೊರತೆ, ದುಬಾರಿ ವೆಚ್ಚದ ನಡುವೆ ಕೃಷಿ ಕಾರ್ಯ ಮಾಡುವ ಕೃಷಿಕರಿಗೆ ವರುಣನ ಕಣ್ಣ ಮುಚ್ಚಾಲೆ ಆಟಕ್ಕೆ ಕಂಗಲಾಗಿದ್ದಾರೆ.

ಮಳೆ ಹಾನಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಕಾಪು ಶಾಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

34 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

51 minutes ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

58 minutes ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

2 hours ago