ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟವುಂಟಾಗಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಮತ್ತೆ ನೆರೆಯ ಭೀತಿ ಎದುರಾಗಿದೆ. ಇನ್ನಂಜೆ – ಮರ್ಕೋಡಿ ಹೊಳೆ ಬಳಿ, ಕಾಪು ಜನಾರ್ದನ ದೇವಸ್ಥಾನದ ಬಳಿ, ಮಲ್ಲಾರು – ಮೂಳೂರು – ಬೆಳಪು ಬೈಲ್, ಉಳಿಯಾರಗೋಳಿ ಕೈಪುಂಜಾಲು ಬೈಲು ಮುಳುಗಡೆಯಾಗಿದೆ.
ಕಳೆದ ಎರಡು ವಾರಗಳ ಹಿಂದೆ ನಿರಂತರ ಮಳೆಯಿಂದಾಗಿ ನೆರೆ ಕಂಡು ಬಂದಿದ್ದ ತಗ್ಗು ಪ್ರದೇಶಗಳಲ್ಲಿ ನೆರೆ ಇಳಿಮುಖವಾದ ಬಳಿಕ ಭತ್ತದ ಕೃಷಿ ಕೆಲಸಗಳು ಬಿರುಸಿನಿಂದ ನಡೆದಿದ್ದವು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿದ ಪರಿಣಾಮ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ನೂರಾರು ಹೆಕ್ಟೇರ್ ಕೃಷಿ ಗದ್ದೆಗಳಲ್ಲಿ ನಡೆಸಲಾಗಿರುವ ಭತ್ತದ ನಾಟಿ ಕೊಳೆಯುವ ಭೀತಿ ಎದುರಾಗಿದೆ. ಕೃಷಿ ಕಾರ್ಯಕ್ಕೆ ಕೆಲಸದವರ ಕೊರತೆ, ದುಬಾರಿ ವೆಚ್ಚದ ನಡುವೆ ಕೃಷಿ ಕಾರ್ಯ ಮಾಡುವ ಕೃಷಿಕರಿಗೆ ವರುಣನ ಕಣ್ಣ ಮುಚ್ಚಾಲೆ ಆಟಕ್ಕೆ ಕಂಗಲಾಗಿದ್ದಾರೆ.
ಮಳೆ ಹಾನಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಕಾಪು ಶಾಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…