ಕಾಪು: ತಾಲೂಕಿನಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯುಂಟಾಗಿದ್ದು ಲಕ್ಷಾಂತರ ರೂಪಾಯಿ ಮೊತ್ತದ ಸೊತ್ತು ನಷ್ಟವುಂಟಾಗಿದೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ಮತ್ತೆ ನೆರೆಯ ಭೀತಿ ಎದುರಾಗಿದೆ. ಇನ್ನಂಜೆ – ಮರ್ಕೋಡಿ ಹೊಳೆ ಬಳಿ, ಕಾಪು ಜನಾರ್ದನ ದೇವಸ್ಥಾನದ ಬಳಿ, ಮಲ್ಲಾರು – ಮೂಳೂರು – ಬೆಳಪು ಬೈಲ್, ಉಳಿಯಾರಗೋಳಿ ಕೈಪುಂಜಾಲು ಬೈಲು ಮುಳುಗಡೆಯಾಗಿದೆ.
ಕಳೆದ ಎರಡು ವಾರಗಳ ಹಿಂದೆ ನಿರಂತರ ಮಳೆಯಿಂದಾಗಿ ನೆರೆ ಕಂಡು ಬಂದಿದ್ದ ತಗ್ಗು ಪ್ರದೇಶಗಳಲ್ಲಿ ನೆರೆ ಇಳಿಮುಖವಾದ ಬಳಿಕ ಭತ್ತದ ಕೃಷಿ ಕೆಲಸಗಳು ಬಿರುಸಿನಿಂದ ನಡೆದಿದ್ದವು. ಆದರೆ ಇದೀಗ ಮತ್ತೆ ಭಾರೀ ಮಳೆ ಸುರಿದ ಪರಿಣಾಮ ಭತ್ತದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದ್ದು ನೂರಾರು ಹೆಕ್ಟೇರ್ ಕೃಷಿ ಗದ್ದೆಗಳಲ್ಲಿ ನಡೆಸಲಾಗಿರುವ ಭತ್ತದ ನಾಟಿ ಕೊಳೆಯುವ ಭೀತಿ ಎದುರಾಗಿದೆ. ಕೃಷಿ ಕಾರ್ಯಕ್ಕೆ ಕೆಲಸದವರ ಕೊರತೆ, ದುಬಾರಿ ವೆಚ್ಚದ ನಡುವೆ ಕೃಷಿ ಕಾರ್ಯ ಮಾಡುವ ಕೃಷಿಕರಿಗೆ ವರುಣನ ಕಣ್ಣ ಮುಚ್ಚಾಲೆ ಆಟಕ್ಕೆ ಕಂಗಲಾಗಿದ್ದಾರೆ.
ಮಳೆ ಹಾನಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಕಾಪು ಶಾಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…