Featured

ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಭೂಮಿ ಕೈಗಾರಿಕೆಗೆ ಶೀಘ್ರ ಸ್ವಾಧೀನ : ಸಚಿವ ಜಗದೀಶ್ ಶೆಟ್ಟರ್-vishwanews24

ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಭೂಮಿ ಕೈಗಾರಿಕೆಗೆ ಶೀಘ್ರ ಸ್ವಾಧೀನ : ಸಚಿವ ಜಗದೀಶ್ ಶೆಟ್ಟರ್

ಕಾಪು: ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಹೂಡಿಕೆದಾರರು ಉತ್ಸುಕರಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಮೂಳೂರು ಸಮೀಪ 250 ಎಕರೆ ಹಾಗೂ ದ.ಕ. ಜಿಲ್ಲೆಯ ಮುಲ್ಕಿ ಸಮೀಪದ ಬಳ್ಳುಂಜೆ ಎಂಬಲ್ಲಿ 800 ಎಕರೆ ಜಾಗವನ್ನು ಸ್ವಾಧೀನ ಪಡಿಸಲು ಪ್ರಸ್ತಾವನೆ ಬಂದಿದೆ. ಆದಷ್ಟು ಬೇಗ ಆ ಜಾಗವನ್ನು ಸ್ವಾಧೀನ ಮಾಡಲಾ ಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಬೆಳಪು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಬೆಂಗಳೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೈಗಾರಿಕೆ ಬೆಳವಣಿಗೆ ಆಗಬೇಕೆಂಬುದು ನಮ್ಮ ಗುರಿಯಾಗಿದೆ. ಆ ಗುರಿಯನ್ನು ಸಾಧಿಸಲು ಹೊಸ ಕೈಗಾರಿಕಾ ನೀತಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಕಳೆದ ಎರಡು ವರ್ಷ ಗಳಿಂದ ಬೆಂಗಳೂರು ಹೊರತು ಪಡಿಸಿ ಉಳಿದ ಕಡೆಗಳಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಮಂಗಳೂರು, ಯಾದಗಿರಿ, ಕೊಪ್ಪಳ, ಬೆಳಗಾವಿ ಹುಬ್ಬಳ್ಳಿ ಧಾರವಾಡ ಸೇರಿದಂತೆ ಹಲವು ಕಡೆಗಳಲ್ಲಿ ಕೈಗಾರಿಕೆ ಸ್ಥಾಪಿಸಲು ದೊಡ್ಡ ಪ್ರಮಾಣದಲ್ಲಿ ಹೂಡಿಕೆದಾರರು ಮುಂದೆ ಬರುತ್ತಿದ್ದಾರೆ ಎಂದರು.
ಬೆಳಪುವಿನಲ್ಲಿ ಸ್ಥಾಪಿಸಲಾದ ಆಕ್ಸಿಜನ್ ಘಟಕದಿಂದ ಈ ಭಾಗದಲ್ಲಿ ಕೊರೋನ ನಿಯಂತ್ರಿಸಲು ಹಾಗೂ ಸಾಕಷ್ಟು ಆಕ್ಸಿಜನ್ ಬಳಕೆ ಮಾಡಲು ಸಾಧ್ಯ ವಾಗಿದೆ. ಕೊರೋನದಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಅಡ್ಡಿಯಾಗಿದ್ದು, ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಅತಿ ಹೆಚ್ಚು ಆಗುತ್ತಿದೆ.ಕೊರೋನ ಶೂನ್ಯಕ್ಕೆ ಬಂದರೆ ಕೈಗಾರಿಕೆ ಬೆಳವಣಿಗೆ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಹೊಸ ಕೈಗಾರಿಕಾ ನೀತಿಯಂತೆ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಒಪ್ಪಂದ ಪತ್ರದಲ್ಲಿ ಷರತ್ತು ವಿಧಿಸಲಾಗಿದೆ. ಅದೇ ರೀತಿ ಎಲ್ಲ ಕೈಗಾರಿಕೆಗಳಲ್ಲಿ ಪ್ರಮುಖ ಕೆಲಸಗಳನ್ನು ಕನ್ನಡಿಗರಿಗೆ ನೀಡಬೇಕು. ಕೆಲಸ ನೀಡದ ಬಗ್ಗೆ ದೂರು ಬಂದರೆ ತನಿಖೆ ನಡೆಸಿ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಎಸ್.ಎನ್. ಕೈಯೋಜನಿಕ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಕೆ.ನಟರಾಜ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago