ಕಾಪು: ತಾಲೂಕಿನ ವಿವಿಧೆಡೆ ಮೀನುಗಾರರಿಂದ ಸಮುದ್ರಪೂಜೆ ಸಹಿತ ಕ್ಷೀರಾಭಿಷೇಕ -Vishwanews24
ಕಾಪು: ತಾಲೂಕಿನ ವಿವಿಧೆಡೆ ಸೋಮವಾರ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು.
ಕಾಪು, ಪೊಲಿಪು, ಕೈಪುಂಜಾಲು, ಮೂಳೂರು ಮೊಗವೀರ ಮಹಾಸಭಾಗಳ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರಗಳು ಮತ್ತು ಪ್ರಾರ್ಥನಾ ಮಂದಿರಗಳ ಸಹಕಾರದೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು.
ಪ್ರತೀ ವರ್ಷ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ಸಮುದ್ರ ಪೂಜೆ ನಡೆಯುತ್ತಿದ್ದು ಆ ಮೂಲಕ ಮೀನುಗಾರರು ಹೇರಳ ಮತ್ಸ್ಯ ಸಂಪತ್ತು ದೊರಕಿಸುವಂತೆ ಮತ್ತು ಮೀನುಗಾರಿಕೆಯ ವೇಳೆ ಯಾವುದೇ ರೀತಿಯ ತೊಂದರೆಗಳು ಆಗದಿರಲೆಂಬ ಪ್ರಾರ್ಥನೆಯೊಂದಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸಹಿತ ಪೂಜೆ ನೆರವೇರಿಸುತ್ತಾರೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಮೊಗವೀರ ಮಹಾಸಭೆ, ಪೊಲಿಪು ಮೊಗವೀರ ಮಹಾಸಭೆ, ಕೈಪುಂಜಾಲು ಮೊಗವೀರ ಮಹಾಸಭೆ, ಮೂಳೂರು ಮೊಗವೀರ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು, ಮೊಗವೀರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
