ಉಡುಪಿ

ಕಾಪು ತಾಲೂಕು ಆಡಳಿತ ಸೌಧದಲ್ಲಿ ನಿಲುಗಡೆಯಾಗದ ಖಾಸಗಿ ಬಸ್ ಗಳು : ಸ್ಟಾಪ್ ಕೊಡಿಸಲು  ಖುದ್ದು ಬಸ್ ನಲ್ಲಿ ಆಗಮಿಸಿದ ತಹಶೀಲ್ದಾರ್ ಪ್ರತಿಭಾ – Vishwanews24

ಕಾಪು ನೂತನ ಆಡಳಿತಸೌಧದ ಬಳಿ ಸ್ಟಾಪ್ ನೀಡದೆ  ಸಂಚರಿಸುತ್ತಿದ್ದ ಖಾಸಗಿ ಬಸ್ ಗಳು

ಆರ್‌ಟಿಒ ಸೂಚನೆಗೆ ನೋ ಕೇರ್: ಸಾರ್ವಜನಿಕರಿಗೆ ತೊಂದರೆ

ಆಡಳಿತಸೌಧದ ಬಳಿ ಸ್ಟಾಪ್ ಕೊಡಿಸಲು ಖುದ್ದು ಬಸ್ ನಲ್ಲಿ ಆಗಮಿಸಿದ ಕಾಪು ತಹಸೀಲ್ದಾರ್ ಪ್ರತಿಭಾ

ತಹಸೀಲ್ದಾರ್  ಹಲವು ಬಾರಿ ಕೇಳಿಕೊಂಡ ಬಳಿಕ ಸ್ಟಾಪ್ ನೀಡಿದ ಬಸ್‌ ನಿರ್ವಾಹಕ

ಕಾಪು ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅನುಕೂಲವಾಗುವಂತೆ ಎಲ್ಲ ಬಸ್‌ಗಳನ್ನು ಅಲ್ಲಿ ನಿಲುಗಡೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಬಸ್ ಮಾಲೀಕರ ಸಂಘಗಳಿಗೆ ಸೂಚನೆ ನೀಡಿದ್ದರೂ ಬಸ್‌ಗಳನ್ನು ನಿಲುಗಡೆ ಮಾಡದೆ ಸಂಚರಿಸುತ್ತಿದ್ದ ಪರಿಣಾಮ ಆಗುವ ತೊಂದರೆ ಮನಗಂಡ ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಶುಕ್ರವಾರ ಖುದ್ದು ಬಸ್‌ನಲ್ಲಿ ಆಗಮಿಸಿ ಆಡಳಿತ ಸೌಧ ಮುಂಬಾಗ ಬಸ್ ನಿಲುಗಡೆ ಪಡೆದು ಕಚೇರಿ ತಲುಪಿದರು.

ಆರ್‌ಟಿಒ ಸೂಚನೆಗೆ ನೋ ಕೇರ್: ಸಾರ್ವಜನಿಕರಿಗೆ ತೊಂದರೆ
ಕಾಪು ನೂತನ ಆಡಳಿತ ಸೌಧದಲ್ಲಿ ಶಾಸಕರ ಕಚೇರಿ, ತಾಲೂಕು ಕಚೇರಿ, ತಾಲೂಕು ಪಂಚಾಯಿತಿ ಕಚೇರಿ, ಉಪಖಜಾನಾಧಿಕಾರಿಗಳ ಕಚೇರಿ, ಆಹಾರ ಶಾಖೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಸ್ ನಿಲುಗಡೆಗೆ ನಿರ್ದೇಶನ ನೀಡುವಂತೆ ಕಾಪು ತಹಸೀಲ್ದಾರ್ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕೋರಿದ್ದರು. ಅದರಂತೆ ಸಾರಿಗೆ ಅಧಿಕಾರಿ ಬಸ್ ನಿಲುಗಡೆ ಮಾಡುವಂತೆ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಕೆನರಾ ಬಸ್ ಮಾಲೀಕರ ಸಂಘ, ಕರಾವಳಿ ಬಸ್ ಮಾಲೀಕರ ಸಂಘ ಹಾಗೂ ಶಿರ್ವ ಬಸ್ ಮಾಲೀಕರ ಸಂಘಕ್ಕೆ 2023 ನವೆಂಬರ್ 3ರಂದು ಸೂಚನೆ ನೀಡಿದ್ದರು. ಆದರೆ ಆ ಬಳಿಕ ಯಾವೊಂದು ಬಸ್‌ಗಳು ನಿಲುಗಡೆ ಮಾಡದೆ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಹಸೀಲ್ದಾರ್ ಗಮನಕ್ಕೆ ತರಲಾಗಿತ್ತು.

ತಹಸೀಲ್ದಾರ್ ಹಲವಾರು ಬಾರಿ ಕೇಳಿಕೊಂಡ ಬಳಿಕ ಸ್ಟಾಪ್ ನೀಡಿದರು
ಪ್ರತಿನಿತ್ಯ ಬಸ್‌ನಲ್ಲಿ ಬರುವ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಬಸ್‌ಗಳವರೊಡನೆ ವಾಗ್ವಾದ ನಡೆಸುವ ಪರಿಸ್ಥಿತಿ ಇತ್ತು. ಇದನ್ನು ತಿಳಿದ ತಹಸೀಲ್ದಾರ್ ಶುಕ್ರವಾರ ಉಡುಪಿಯಿಂದ ಖುದ್ದಾಗಿ ಕಾಪುವಿಗೆ ಬಸ್‌ನಲ್ಲಿ ಆಗಮಿಸಿದ್ದರು. ತಹಸೀಲ್ದಾರ್ ನಿರ್ವಾಹಕರಲ್ಲಿ ಹಲವು ಬಾರಿ ಕೇಳಿಕೊಂಡ ಬಳಿಕ ಆಡಳಿತ ಸೌಧ ಮುಂಭಾಗ ನಿಲುಗಡೆ ನೀಡಿದ್ದಾರೆ. ಪ್ರಯಾಣಿಕರಿಗೆ ಅನುಕೂಲಕ್ಕಾಗಿ ಬಸ್‌ಗಳನ್ನುನಿಲುಗಡೆ ಮಾಡುವಂತೆ ಸಾರಿಗೆ ಅಧಿಕಾರಿ ಕಟ್ಟು ನಿಟ್ಟಿನ ಕ್ರಮವಹಿಸಬೇಕು ಎಂದು ತಹಸೀಲ್ದಾರ್ ಸೂಚಿಸಿದ್ದಾರೆ.

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

2 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

2 hours ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

2 hours ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago