ಕಾಪು: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯ ಶಿಫಾರಸ್ಸಿನಡಿಯಲ್ಲಿ ನಿರ್ಮಾಣಗೊಂಡ ಹತ್ತು ಕೋಟಿ ವೆಚ್ಚದ ಕಾಪು ತಾಲೂಕು ಆಡಳಿತ ಸೌಧದ ಉದ್ಘಾಟನೆಯ ಭಾಗ್ಯ ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಒದಗಿಬಂದಿದ್ದರೂ ಕೂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇರಿದ್ದು ಕೇವಲ ಬೆರಳೆಣಿಕೆಯ 350 ಮಂದಿ ಎಂಬುದು ವಿಪರ್ಯಾಸ.
ಕಂದಾಯ ಸಚಿವರಿಂದ ಉದ್ಘಾಟನೆಯಾಗಬೇಕಿದ್ದ ಸೌಧ ಶಾಸಕರ ಸಂವಹನ ಕೊರತೆಯಿಂದ ಸಚಿವರು ಸಮಯ ಒದಗಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದ್ದು ಸದ್ಯ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಕಟ್ಟಡ ಉದ್ಘಾಟಿಸುವ ಕುರಿತಾಗಿ ಆಮಂತ್ರಣ ಪತ್ರಿಕೆ ಮುದ್ರಣವಾಗಿತ್ತು ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದದೂ ಕೂಡ ಕಾರ್ಯಕ್ರಮದಲ್ಲಿ ಗೈರಾಗಿದ್ದರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಕಟ್ಟಡ ಮತ್ತು ಕಾರ್ಯಕ್ರಮ ಉದ್ಘಾಟಿಸಿದರು.
ಉದ್ಘಾಟನೆ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ 300 ಮಂದಿ
ಕಾಪುವಿಗೆ ಹೊಸ ಮೆರಗು ಕೊಡುವಂತಹ ತಾಲೂಕು ಆಡಳಿತ ಕಚೇರಿಯ ಉದ್ಘಾಟನೆ ಹಬ್ಬದ ಸಂಭ್ರಮವಾಗಬೇಕಿತ್ತು ಮತ್ತು ಜನ ಸಾಮಾನ್ಯರಿಗಾದರೂ ಮಾಹಿತಿ ನೀಡುವ ಕೆಲಸ ಆಗಬೇಕಿತ್ತು ಆದರೆ ಯಾವುದೇ ಪ್ರಚಾರ ನೀಡದೆ ತುರ್ತಾಗಿ ಉದ್ಘಾಟನೆ ಮಾಡುವ ಉದ್ದೇಶವೇನಿತ್ತು ಎಂಬುದು ಪ್ರಶ್ನೆ.
2000 ಮಂದಿಯ ಊಟ-700 ಟಿಫಿನ್ ವೇಸ್ಟ್
ಕಾಪು ತಾಲೂಕು ಆಡಳಿತ ಕಚೇರಿ ಉದ್ಘಾಟನೆಗೆ ಆಗಮಿಸುವ ಸಾರ್ವಜನಿಕರಿಗಾಗಿ ಬೆಳಿಗ್ಗೆ 700 ಟಿಫಿನ್ ಮತ್ತು ಮಧ್ಯಾಹ್ನ2000 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಆದರೇ ಕಾರ್ಯಕ್ರಮಲ್ಲಿ ಸೇರಿದ್ದು ಕೇವಲ 350 ಮಂದಿ ಅದರಲ್ಲೂ 100ಮಂದಿ ಅಧಿಕಾರಿಗಳು ಹಾಗೂ ಫಲಾನುಭವಿಗಳು ಸದ್ಯ ದಾನಿಗಳಿಂದ ಸಂಗ್ರಹಿಸಿ ವ್ಯವಸ್ಥೆ ಮಾಡಿದ್ದ ಊಟ ಕೂಡ ವೇಸ್ಟ್ ಆಗಿದೆ ಎಂಬುದು ಬೇಸರದ ಸಂಗತಿ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 ಕಾಪು
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…