Featured

ಕಾಪು ತಾಲೂಕು ಆಡಳಿತ ಸೌಧ ಉದ್ಘಾಟನೆಗೆ ಸೇರಿದ್ದು ಬೆರಳೆಣಿಕೆಯ 350 ಮಂದಿ: ಜನವಿಶ್ವಾಸ ಕಳೆದುಕೊಂಡರೆ ಸ್ವಯಂಘೋಷಿತ ಸರಳ ಸಜ್ಜನ ಶಾಸಕ ಲಾಲಾಜಿ : vishwanews24

ಕಾಪು ತಾಲೂಕು ಆಡಳಿತ ಸೌಧ ಉದ್ಘಾಟನೆಗೆ ಸೇರಿದ್ದು ಬೆರಳೆಣಿಕೆಯ 350 ಮಂದಿ: ಜನವಿಶ್ವಾಸ ಕಳೆದುಕೊಂಡರೆ ಸ್ವಯಂಘೋಷಿತ ಸರಳ ಸಜ್ಜನ ಶಾಸಕ ಲಾಲಾಜಿ : vishwanews24

ಕೂರಲು ಹಾಕಿದ್ದ ಕುರ್ಚಿಗಳು ಖಾಲಿ-ಖಾಲಿ

ಸತ್ಕಾರಕ್ಕೆ ತಂದ 700 ಟಿಫಿನ್ ಮತ್ತು 2000 ಮಂದಿಯ ಊಟ ವೇಸ್ಟ್

ಕಾಪು: ಮಾಜಿ ಸಚಿವ ವಿನಯ ಕುಮಾರ್ ಸೊರಕೆಯ ಶಿಫಾರಸ್ಸಿನಡಿಯಲ್ಲಿ ನಿರ್ಮಾಣಗೊಂಡ ಹತ್ತು ಕೋಟಿ ವೆಚ್ಚದ ಕಾಪು ತಾಲೂಕು ಆಡಳಿತ ಸೌಧದ ಉದ್ಘಾಟನೆಯ ಭಾಗ್ಯ ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಒದಗಿಬಂದಿದ್ದರೂ ಕೂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೇರಿದ್ದು ಕೇವಲ‌ ಬೆರಳೆಣಿಕೆಯ 350 ಮಂದಿ ಎಂಬುದು ವಿಪರ್ಯಾಸ.

ಕಂದಾಯ ಸಚಿವರಿಂದ ಉದ್ಘಾಟನೆಯಾಗಬೇಕಿದ್ದ ಸೌಧ ಶಾಸಕರ ಸಂವಹನ ಕೊರತೆಯಿಂದ ಸಚಿವರು ಸಮಯ ಒದಗಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದ್ದು ಸದ್ಯ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಕಟ್ಟಡ ಉದ್ಘಾಟಿಸುವ ಕುರಿತಾಗಿ ಆಮಂತ್ರಣ ಪತ್ರಿಕೆ ಮುದ್ರಣವಾಗಿತ್ತು ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದದೂ ಕೂಡ ಕಾರ್ಯಕ್ರಮದಲ್ಲಿ ಗೈರಾಗಿದ್ದರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಕಟ್ಟಡ ಮತ್ತು ಕಾರ್ಯಕ್ರಮ ಉದ್ಘಾಟಿಸಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ 300 ಮಂದಿ
ಕಾಪುವಿಗೆ ಹೊಸ ಮೆರಗು ಕೊಡುವಂತಹ ತಾಲೂಕು ಆಡಳಿತ ಕಚೇರಿಯ ಉದ್ಘಾಟನೆ ಹಬ್ಬದ ಸಂಭ್ರಮವಾಗಬೇಕಿತ್ತು ಮತ್ತು ಜನ ಸಾಮಾನ್ಯರಿಗಾದರೂ ಮಾಹಿತಿ ನೀಡುವ ಕೆಲಸ ಆಗಬೇಕಿತ್ತು ಆದರೆ ಯಾವುದೇ ಪ್ರಚಾರ ನೀಡದೆ ತುರ್ತಾಗಿ ಉದ್ಘಾಟನೆ ಮಾಡುವ ಉದ್ದೇಶವೇನಿತ್ತು ಎಂಬುದು ಪ್ರಶ್ನೆ.

2000 ಮಂದಿಯ ಊಟ-700 ಟಿಫಿನ್ ವೇಸ್ಟ್
ಕಾಪು ತಾಲೂಕು ಆಡಳಿತ ಕಚೇರಿ ಉದ್ಘಾಟನೆಗೆ ಆಗಮಿಸುವ ಸಾರ್ವಜನಿಕರಿಗಾಗಿ ಬೆಳಿಗ್ಗೆ 700 ಟಿಫಿನ್ ಮತ್ತು ಮಧ್ಯಾಹ್ನ2000 ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಆದರೇ ಕಾರ್ಯಕ್ರಮಲ್ಲಿ ಸೇರಿದ್ದು ಕೇವಲ 350 ಮಂದಿ ಅದರಲ್ಲೂ 100ಮಂದಿ ಅಧಿಕಾರಿಗಳು ಹಾಗೂ ಫಲಾನುಭವಿಗಳು ಸದ್ಯ ದಾನಿಗಳಿಂದ ಸಂಗ್ರಹಿಸಿ ವ್ಯವಸ್ಥೆ ಮಾಡಿದ್ದ ಊಟ ಕೂಡ ವೇಸ್ಟ್ ಆಗಿದೆ ಎಂಬುದು ಬೇಸರದ ಸಂಗತಿ.

ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 ಕಾಪು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago