ಕಾಪು: ತಾಲೂಕು ಕನ್ನಡ ಜಾನಪದ ಪರಿಷತ್ನ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಇವರನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಎಸ್. ಆಯ್ಕೆಮಾಡಿದ್ದು, ಪರಿಷತ್ನ ಗೌರವಾಧ್ಯಕ್ಷರಾಗಿ ಉದ್ಯಮಿ ಕೆ.ಸತ್ಯೇಂದ್ರ ಪೈ ಕಟಪಾಡಿ, ಗೌರವ ಸಲಹೆಗಾರರಾಗಿ ಹಿರಿಯ ಚಿಂತಕ ಬಿ.ಪುಂಡಲೀಕ ಮರಾಠೆ ಶಿರ್ವ, ಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ ಪ್ರಭು ಹಿರೇಬೆಟ್ಟು, ಜತೆ ಕಾರ್ಯದರ್ಶಿಯಾಗಿ ಕಲಾವಿದೆ ಪವಿತ್ರ ಶೆಟ್ಟಿ ಕಟಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ಪರಿಷತ್ನ ಕೋಶಾಧಿಕಾರಿಯಾಗಿ ರಂಗನಟ ಕೆ.ನಾಗೇಶ್ ಕಾಮತ್ ಕಟಪಾಡಿ, ಮಾಧ್ಯಮ ಕಾರ್ಯದರ್ಶಿಯಾಗಿ ಪತ್ರಕರ್ತ ರಾಕೇಶ್ ಕುಂಜೂರ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಪ್ರಭು ಕರ್ವಾಲ್, ಸಂಚಾಲಕರಾಗಿ ಉಡುಪಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ದಯಾನಂದ ಡಿ, ಸಂಪಾದಕರಾಗಿ ಯುವಸಾಹಿತಿ ದೀಪಕ್ ಕೆ. ಬೀರ ಪಡುಬಿದ್ರಿ, ಸಮಿತಿ ಸದಸ್ಯರಾಗಿ ಸಮಾಜಸೇವಕ ಸುನೀಲ್ ಜಾನ್ ಡಿಸೋಜಾ ಶಂಕರಪುರ, ಜಾನಪದ ಕಲಾವಿದ ಹರೀಶ್ ಹೇರೂರು, ಆಕಾಶವಾಣಿ ಕಲಾವಿದೆ ಭಾಗ್ಯಲಕ್ಷ್ಮೀ ಉಪ್ಪೂರು, ಶಂಕರ್ ಶೇರಿಗಾರ್ ಮಟ್ಟು, ನ್ಯತ್ಯಕಲಾವಿದೆ ಕಾವ್ಯ ಪೈ ಕುತ್ಯಾರು, ಗೀತಾ ಆಚಾರ್ಯ ಕಾಪು, ಲಕ್ಷ್ಮಣ್ ಟಿ ಕಟಪಾಡಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…