Featured

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ.vishwanews24

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ .

ಕಾಪು: ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡಿನ ಪರಿಶಿಷ್ಟ ಪಂಗಡ ಗೊಡ್ಡ ಸಮುದಾಯದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ.
ತಮ್ಮ ಆರಾಧ್ಯ ದೈವ ಸುಮಾರು 300 ವರ್ಷಗಳ ಇತಿಹಾಸ ಇರುವ ಮಟ್ಟು ಶ್ರೀ ಬ್ರಹ್ಮ್ಮ ಮುಗ್ಗೆರ್ಕಳ ದೈವಸ್ಥಾನ 2018ರಲ್ಲಿ ಊರ ಹಾಗೂ ಪರವೂರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡಿದ್ದು , ಕೇವಲ ಕೇವಲ ಗರ್ಭಗುಡಿ ಹಾಗೂ ಮುಖಮಂಟಪದ ಕಾಮಗಾರಿ ಮಾತ್ರ ಪೂರ್ಣಗೊಂಡಿರುತ್ತದೆ . ಅಗ್ರ ಸಭೆ ಹಾಗೂ ಆವರಣಗೋಡೆ ಕಾಮಗಾರಿ ಬಾಕಿ ಇರುತ್ತದೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಶಿಷ್ಟರಾದ ನಮಗೆ ಕಷ್ಟ ಸಾದ್ಯ ಆದ್ದರಿಂದ ನಾವು ಸರ್ಕಾರದ ಜನಪ್ರತಿನಿಧಿಗಳಿಗೆ ಹಾಗೂ ಮುಜರಾಯಿ ಇಲಾಖೆಗೆ ಸರಕಾರಿ ಅನುದಾನಕ್ಕೆ ಮನವಿ ಸಲ್ಲಿಸಿರುತ್ತೇವರ ಆದರೆ ಎರಡು ವರ್ಷ ಕಳೆದರೂ ಯಾವುದೇ ಸೂಕ್ತ ಸರಕಾರಿ ಅನುದಾನ ನಮಗೆ ಸಿಕ್ಕಿರುವುದಿಲ್ಲ ಎಂದು ಗುರುರಾಜ್ ಅವರು ಆಕ್ರೋಶ ಹೊರ ಹಾಕಿದರು. ಅಲ್ಲದೇ ನಮ್ಮ ವಾರ್ಡ್ನಲ್ಲಿ 3-4 ದಿವಸಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು ಅದಕ್ಕೂ ಪರಿಶಿಷ್ಟರಾದ ನಮ್ಮಿಂದ ಪಂಚಾಯತ್ ನೀರಿನ ಬಿಲ್ಲುನ್ನು ಪ್ರತಿ ತಿಂಗಳು ಪಡೆಯುತ್ತಾರೆ.ಸುಮಾರು 50 ಪರಿಶಿಷ್ಟ ಕುಟುಂಬಗಳು ಈ ಭಾಗದಲ್ಲಿ ವಾಸಿಸುತ್ತಿದ್ದು ಕೆಲವು ಕುಟುಂಬಗಳಿಗೆ ಸೂಕ್ತ ಜಾಗ ಹಾಗೂ ಮನೆಯ ವ್ಯವಸ್ಥೆ ಇರುವುದಿಲ್ಲ ಅದರಿಂದ ನಮಗೆ ಸೂಕ್ತ ಸರಕಾರಿ ಜಾಗವನ್ನು ನೀಡಲು ಆಗ್ರಹಿಸುತ್ತೇವೆ .ಅಲ್ಲದೆ ನಮ್ಮಲ್ಲಿರುವ ವಿದ್ಯಾವಂತ ಯುವಕ ಯುವತಿಯರಿಗೆ ಕೋಟೆ ಪಂಚಾಯತ್ ನಲ್ಲಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.

ಈ‌ ಬಾರಿಯೂ ಬೇಡಿಕೆ ಈಡೇರಿಸದೆ ಇದ್ದಲ್ಲಿ ತಾ.ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕೂಡ ಮತದಾನ ಬಹಿಷ್ಕಾರ ಮಾಡುವ ನಿಲುವಾಗಿದೆ ಎಂದರು.
ಈ‌ ಸಂಧರ್ಭದಲ್ಲಿ ಪ್ರಮುಖರಾದ ನಾಗರಾಜ, ದಿನೇಶ್,ಪ್ರದೀಪ್,ರಾಘು,ಧನಂಜಯ ಮೊದಲಾದವರು ಉಪಸ್ಥಿತಿತರಿದ್ದರು.
ಬ್ಯೂರೋ ರಿಪೋರ್ಟ್
ವಿಶ್ವ ನ್ಯೂಸ್24 ಉಡುಪಿ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago