Featured

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ.vishwanews24

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ .

ಕಾಪು: ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡಿನ ಪರಿಶಿಷ್ಟ ಪಂಗಡ ಗೊಡ್ಡ ಸಮುದಾಯದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ.
ತಮ್ಮ ಆರಾಧ್ಯ ದೈವ ಸುಮಾರು 300 ವರ್ಷಗಳ ಇತಿಹಾಸ ಇರುವ ಮಟ್ಟು ಶ್ರೀ ಬ್ರಹ್ಮ್ಮ ಮುಗ್ಗೆರ್ಕಳ ದೈವಸ್ಥಾನ 2018ರಲ್ಲಿ ಊರ ಹಾಗೂ ಪರವೂರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡಿದ್ದು , ಕೇವಲ ಕೇವಲ ಗರ್ಭಗುಡಿ ಹಾಗೂ ಮುಖಮಂಟಪದ ಕಾಮಗಾರಿ ಮಾತ್ರ ಪೂರ್ಣಗೊಂಡಿರುತ್ತದೆ . ಅಗ್ರ ಸಭೆ ಹಾಗೂ ಆವರಣಗೋಡೆ ಕಾಮಗಾರಿ ಬಾಕಿ ಇರುತ್ತದೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಶಿಷ್ಟರಾದ ನಮಗೆ ಕಷ್ಟ ಸಾದ್ಯ ಆದ್ದರಿಂದ ನಾವು ಸರ್ಕಾರದ ಜನಪ್ರತಿನಿಧಿಗಳಿಗೆ ಹಾಗೂ ಮುಜರಾಯಿ ಇಲಾಖೆಗೆ ಸರಕಾರಿ ಅನುದಾನಕ್ಕೆ ಮನವಿ ಸಲ್ಲಿಸಿರುತ್ತೇವರ ಆದರೆ ಎರಡು ವರ್ಷ ಕಳೆದರೂ ಯಾವುದೇ ಸೂಕ್ತ ಸರಕಾರಿ ಅನುದಾನ ನಮಗೆ ಸಿಕ್ಕಿರುವುದಿಲ್ಲ ಎಂದು ಗುರುರಾಜ್ ಅವರು ಆಕ್ರೋಶ ಹೊರ ಹಾಕಿದರು. ಅಲ್ಲದೇ ನಮ್ಮ ವಾರ್ಡ್ನಲ್ಲಿ 3-4 ದಿವಸಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು ಅದಕ್ಕೂ ಪರಿಶಿಷ್ಟರಾದ ನಮ್ಮಿಂದ ಪಂಚಾಯತ್ ನೀರಿನ ಬಿಲ್ಲುನ್ನು ಪ್ರತಿ ತಿಂಗಳು ಪಡೆಯುತ್ತಾರೆ.ಸುಮಾರು 50 ಪರಿಶಿಷ್ಟ ಕುಟುಂಬಗಳು ಈ ಭಾಗದಲ್ಲಿ ವಾಸಿಸುತ್ತಿದ್ದು ಕೆಲವು ಕುಟುಂಬಗಳಿಗೆ ಸೂಕ್ತ ಜಾಗ ಹಾಗೂ ಮನೆಯ ವ್ಯವಸ್ಥೆ ಇರುವುದಿಲ್ಲ ಅದರಿಂದ ನಮಗೆ ಸೂಕ್ತ ಸರಕಾರಿ ಜಾಗವನ್ನು ನೀಡಲು ಆಗ್ರಹಿಸುತ್ತೇವೆ .ಅಲ್ಲದೆ ನಮ್ಮಲ್ಲಿರುವ ವಿದ್ಯಾವಂತ ಯುವಕ ಯುವತಿಯರಿಗೆ ಕೋಟೆ ಪಂಚಾಯತ್ ನಲ್ಲಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.

ಈ‌ ಬಾರಿಯೂ ಬೇಡಿಕೆ ಈಡೇರಿಸದೆ ಇದ್ದಲ್ಲಿ ತಾ.ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕೂಡ ಮತದಾನ ಬಹಿಷ್ಕಾರ ಮಾಡುವ ನಿಲುವಾಗಿದೆ ಎಂದರು.
ಈ‌ ಸಂಧರ್ಭದಲ್ಲಿ ಪ್ರಮುಖರಾದ ನಾಗರಾಜ, ದಿನೇಶ್,ಪ್ರದೀಪ್,ರಾಘು,ಧನಂಜಯ ಮೊದಲಾದವರು ಉಪಸ್ಥಿತಿತರಿದ್ದರು.
ಬ್ಯೂರೋ ರಿಪೋರ್ಟ್
ವಿಶ್ವ ನ್ಯೂಸ್24 ಉಡುಪಿ

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

22 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

22 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

22 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

23 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

23 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

23 hours ago