Featured

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ.vishwanews24

ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡ್ ನ ಪರಿಶಿಷ್ಟ ಸಮುದಾಯದವರಿಂದ ಮತದಾನ ಬಹಿಷ್ಕಾರ .

ಕಾಪು: ರಾಜ್ಯದ ಹಲವೆಡೆ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲೆಯ ಕಾಪು ತಾಲೂಕು ಕೋಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಮಟ್ಟು ವಾರ್ಡಿನ ಪರಿಶಿಷ್ಟ ಪಂಗಡ ಗೊಡ್ಡ ಸಮುದಾಯದವರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದೆ.
ತಮ್ಮ ಆರಾಧ್ಯ ದೈವ ಸುಮಾರು 300 ವರ್ಷಗಳ ಇತಿಹಾಸ ಇರುವ ಮಟ್ಟು ಶ್ರೀ ಬ್ರಹ್ಮ್ಮ ಮುಗ್ಗೆರ್ಕಳ ದೈವಸ್ಥಾನ 2018ರಲ್ಲಿ ಊರ ಹಾಗೂ ಪರವೂರ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರಗೊಂಡಿದ್ದು , ಕೇವಲ ಕೇವಲ ಗರ್ಭಗುಡಿ ಹಾಗೂ ಮುಖಮಂಟಪದ ಕಾಮಗಾರಿ ಮಾತ್ರ ಪೂರ್ಣಗೊಂಡಿರುತ್ತದೆ . ಅಗ್ರ ಸಭೆ ಹಾಗೂ ಆವರಣಗೋಡೆ ಕಾಮಗಾರಿ ಬಾಕಿ ಇರುತ್ತದೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಶಿಷ್ಟರಾದ ನಮಗೆ ಕಷ್ಟ ಸಾದ್ಯ ಆದ್ದರಿಂದ ನಾವು ಸರ್ಕಾರದ ಜನಪ್ರತಿನಿಧಿಗಳಿಗೆ ಹಾಗೂ ಮುಜರಾಯಿ ಇಲಾಖೆಗೆ ಸರಕಾರಿ ಅನುದಾನಕ್ಕೆ ಮನವಿ ಸಲ್ಲಿಸಿರುತ್ತೇವರ ಆದರೆ ಎರಡು ವರ್ಷ ಕಳೆದರೂ ಯಾವುದೇ ಸೂಕ್ತ ಸರಕಾರಿ ಅನುದಾನ ನಮಗೆ ಸಿಕ್ಕಿರುವುದಿಲ್ಲ ಎಂದು ಗುರುರಾಜ್ ಅವರು ಆಕ್ರೋಶ ಹೊರ ಹಾಕಿದರು. ಅಲ್ಲದೇ ನಮ್ಮ ವಾರ್ಡ್ನಲ್ಲಿ 3-4 ದಿವಸಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು ಅದಕ್ಕೂ ಪರಿಶಿಷ್ಟರಾದ ನಮ್ಮಿಂದ ಪಂಚಾಯತ್ ನೀರಿನ ಬಿಲ್ಲುನ್ನು ಪ್ರತಿ ತಿಂಗಳು ಪಡೆಯುತ್ತಾರೆ.ಸುಮಾರು 50 ಪರಿಶಿಷ್ಟ ಕುಟುಂಬಗಳು ಈ ಭಾಗದಲ್ಲಿ ವಾಸಿಸುತ್ತಿದ್ದು ಕೆಲವು ಕುಟುಂಬಗಳಿಗೆ ಸೂಕ್ತ ಜಾಗ ಹಾಗೂ ಮನೆಯ ವ್ಯವಸ್ಥೆ ಇರುವುದಿಲ್ಲ ಅದರಿಂದ ನಮಗೆ ಸೂಕ್ತ ಸರಕಾರಿ ಜಾಗವನ್ನು ನೀಡಲು ಆಗ್ರಹಿಸುತ್ತೇವೆ .ಅಲ್ಲದೆ ನಮ್ಮಲ್ಲಿರುವ ವಿದ್ಯಾವಂತ ಯುವಕ ಯುವತಿಯರಿಗೆ ಕೋಟೆ ಪಂಚಾಯತ್ ನಲ್ಲಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.

ಈ‌ ಬಾರಿಯೂ ಬೇಡಿಕೆ ಈಡೇರಿಸದೆ ಇದ್ದಲ್ಲಿ ತಾ.ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕೂಡ ಮತದಾನ ಬಹಿಷ್ಕಾರ ಮಾಡುವ ನಿಲುವಾಗಿದೆ ಎಂದರು.
ಈ‌ ಸಂಧರ್ಭದಲ್ಲಿ ಪ್ರಮುಖರಾದ ನಾಗರಾಜ, ದಿನೇಶ್,ಪ್ರದೀಪ್,ರಾಘು,ಧನಂಜಯ ಮೊದಲಾದವರು ಉಪಸ್ಥಿತಿತರಿದ್ದರು.
ಬ್ಯೂರೋ ರಿಪೋರ್ಟ್
ವಿಶ್ವ ನ್ಯೂಸ್24 ಉಡುಪಿ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago