ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ: ಕ್ಷೇತ್ರದ ಅಭಿವೃದ್ದಿಗೆ ವಿವಿಧ ಯೋಜನೆಗಳಿಗೆ ಸತತ ಪ್ರಯತ್ನ :- ಶಾಸಕ ಲಾಲಾಜಿ ಮೆಂಡನ್ vishwanews24
ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ: vishwanews24
ಕಾಪು: ಕಾಪು ತಾಲೂಕು ಉಡುಪಿ ಜಿಲ್ಲೆ ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ ಆಚರಣೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ ಆಚಾರ್ಯ ವಿಚಾರಸಂಕಿರಣ ಸಭಾಭವನದಲ್ಲಿ ನಡೆಯಿತು.

ಕಾಪು ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕಿನ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿಯವರು ಧ್ವಜಾರೋಹಣಗೈದು ಕನ್ನಡ ರಾಜ್ಯೋತ್ಸವದ ಶುಭಾ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ ” ಸರ್ಕಾರದ ನೂತನ ಯೋಜನೆಗಳನ್ನು ಕಾಪು ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತರುವ ಕೆಲಸ ಕಾರ್ಯಗಳು ನಡೆಯುತ್ತಿದ್ದು ಅದೇ ರೀತಿಯಲ್ಲಿ ನಮ್ಮ ನಾಡಿನ ಜಲ ನೆಲ ಉಳಿಸುವ ಕಾರ್ಯ ಒಟ್ಟಾಗಿ ಮಾಡಬೇಕಿದೆ ಮತ್ತು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಎಂದರು.

ಈ ಸಂಧರ್ಭದಲ್ಲಿ ಸಮಾಜ ಸೇವಕ ಈಜುಪಟು ಈಶ್ವರ್ ಮಲ್ಪೆ,ಅಪತ್ಭಾಂದವ ಪಾಂಗಾಳ ಸುಂದರ ಬೆಲ್ಚಡ,ಚಿತ್ರಕಲಾವಿದ ಶಶಾಂಕ್ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್, ಸಬ್ಇನ್ಸ್ಪೆಕ್ಟರ್ ರಾಘವೇಂದ್ರ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪುಂಡಲೀಕ ಮರಾಠೆ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿವೇಕಾನಂದ ಗಾಂವ್ಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ, ಶಿಲ್ಪಾ ಜಿ. ಸುವರ್ಣ , ಮೊದಲಾದವರು ಉಪಸ್ಥಿತರಿದ್ದರು.
ನೀಲಾನಂದ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ,ಶಂಕರ್ ವಂದಿಸಿದರು .


