ಕಾಪು ತಾಲೂಕು ಮಟ್ಟದ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಯಾಗಿ ಶ್ರೀಮತಿ ಶಾರದೇಶ್ವರಿ ಗುರ್ಮೆ ಆಯ್ಕೆ:Vishwanews24
ಕಾಪು ತಾಲೂಕು ಮಟ್ಟದ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಯಾಗಿ ಶ್ರೀಮತಿ ಶಾರದೇಶ್ವರಿ ಗುರ್ಮೆ ಆಯ್ಕೆ:Vishwanews24
ಉಡುಪಿ: ಕಾಪು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಾಪು ತಾಲೂಕಿನ ಸಂಜೀವಿನಿ ಒಕ್ಕೂಟಗಳನ್ನೊಳಗೊಂಡ “ಇಂಚರ” ಕಾಪು ತಾಲೂಕು ಮಟ್ಟದ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಯಾಗಿ ಶ್ರೀಮತಿ ಶಾರದೇಶ್ವರಿ ಗುರ್ಮೆ ಆಯ್ಕೆ ಯಾಗಿರುತ್ತಾರೆ.
ಕುತ್ಯಾರು ಗ್ರಾಮ ಪಂಚಾಯತ್ ಮಟ್ಟದ ಪಾವನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಯಾದ ಇವರು 2019 ರಲ್ಲಿ ಜೆಸಿಐ ಕಾಪುವಿನ ಯಶಸ್ವಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿದಿ, ಜೆಸಿಐ
ವಲಯ 15 ರ ಪೂರ್ವ ವಲಯಾಧಿಕಾರಿಯಾಗಿರುತ್ತಾರೆ.
ಪ್ರಸ್ತುತ ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯಸ್ಥಾಪನಾ ಸಮಿತಿ ಸದಸ್ಯರು ಹಾಗೂ ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಪ್ರಗತಿಪರ ಸಾವಯವ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
