ಕಾಪು : ವಿಷ ಜಂತು ಕಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.
ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದರು.ಈ ವೇಳೆ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.
ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ರೋಹಿತ್ ಅವರು ನಿನ್ನೆ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…