ಕಾಪು : ವಿಷ ಜಂತು ಕಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.
ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಬಲೀಂದ್ರ ಪೂಜೆಯ ಪ್ರಯುಕ್ತ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದರು.ಈ ವೇಳೆ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.
ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ರೋಹಿತ್ ಅವರು ನಿನ್ನೆ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…