ಕಾಪು: ಕಾಪು ವಿಧಾನಸಭಾ ಕ್ಷೇತ್ರದ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಫೆ.16 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕ ಕೋಡ್ದಬ್ಬು ದೈವಸ್ಥಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ತೆಂಕ ನಾಥು ಮುಖಾರಿ ಮನೆ ಹತ್ತಿರದಿಂದ ಭೋಜ ದೇವಾಡಿಗ ಮನೆ ತನಕ ರಸ್ತೆ ಅಭಿವೃದ್ಧಿ – 10 ಲಕ್ಷ, ಅದಮಾರು ರಸ್ತೆಯಿಂದ ಶ್ರೀಧರ್ ದೇವಾಡಿಗ ಮನೆ ತನಕ ರಸ್ತೆ ಅಭಿವೃದ್ಧಿ – 10 ಲಕ್ಷ, ಬ್ರಹ್ಮಸ್ಥಾನ ಬಳಿಯಿಂದ ಕುಶಲ ಕರ್ಕೇರ ಮನೆ ಬಳಿ ರಸ್ತೆ ಅಭಿವೃದ್ಧಿ – 10 ಲಕ್ಷ, ದಿ. ವಾರಿಜಾ ಶೆಟ್ಟಿ ಅವರ ಮನೆಯಿಂದ ಕುಸುಲೊಟ್ಟು ಮಂಜತ್ತಾಯ ಮೂಲಸ್ಥಾನ ವರೆಗೆ ರಸ್ತೆ ಅಭಿವೃದ್ಧಿ – 10 ಲಕ್ಷ ಸೇರಿದಂತೆ ಒಟ್ಟು 50 ಲಕ್ಷ ರೂಪಾಯಿ ವೆಚ್ಚದ ರಸ್ತೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ :
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶಾರದಾ ಕೆ. ಪೂಜಾರಿ, ಕೇಶವ ಮೊಯಿಲಿ, ತೆಂಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಖ ಸಿ. ಪೂಜಾರಿ, ಮಾಜಿ ಉಪಾಧ್ಯಕ್ಷರಾದ ರತ್ನಾಕರ ಕೋಟ್ಯಾನ್, ಮಾಜಿ ಸದಸ್ಯರಾದ ಜಯಶ್ರೀ, ಸಂತೋಷ್, ಮನೋಜ್ ಶೆಟ್ಟಿ, ಅಮ್ಮಣ್ಣಿ ಕುಂದರ್, ಸುಂದರಿ, ಶಿವಪ್ರಸಾದ್ ಎಲ್ಲದಡಿ, ವಿನಯ್ ಹೆಗ್ಡೆ, ಮಾಜಿ ಮಂಡಲ ಅಧ್ಯಕ್ಷರಾದ ವೈ ಗೋಪಾಲ ಶೆಟ್ಟಿ, ತೆಂಕ ಗ್ರಾಮ ಪಂಚಾಯತ್ ಕಾರ್ಯದರ್ಶಿ ವಿಜಯ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…