Featured

ಕಾಪು: ದರೋಡೆಗೆ ಸಂಚು – ಕಾರಿನಲ್ಲಿ ಮಾರಕಾಯುಧಗಳು ಪತ್ತೆ ; ಆರು ಮಂದಿಯ ಬಂಧನ – vishwanews24

ಕಾಪು: ದರೋಡೆಗೆ ಸಂಚು – ಕಾರಿನಲ್ಲಿ ಮಾರಕಾಯುಧಗಳು  ಪತ್ತೆ ; ಆರು ಮಂದಿಯ ಬಂಧನ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಕಾಪು ಪೊಲೀಸರು ಶನಿವಾರ ಸಂಜೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್‌ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್ ಮತ್ತು ಫರಂಗಿಪೇಟೆಯ ಶ್ರೀಕಾಂತ್ ಶ್ರೀಪತಿ ಬಂಧಿತ ಆರೋಪಿಗಳು.

ಬಂಧಿತರಿಂದ ಕಾರು, ಮಾರಕಾಯುಧಗಳು, ಖಾರದ ಪುಡಿ ಸಹಿತ ಇತರ ವಸ್ತುಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಾವರದ ಬಳಿ ಶನಿವಾರ ಸಂಜೆ ಅನುಮಾನಾಸ್ಪದ ವಾಗಿ ಸಂಚರಿಸುತ್ತಿದ್ದ ಕಾರೊಂದನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಾಶ್ರೀ ಮಾನೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರನ್ನು ನಿಲ್ಲಿಸದೆ ಕಾಪು ಕಡೆ ಪರಾರಿಯಾಗಿದ್ದಾರೆ. ಬಳಿಕ ಈ ಬಗ್ಗೆ ಕಾಪು ಠಾಣೆಗೆ ಮಾಹಿತಿ ನೀಡಿದ ಜಯಾಶ್ರೀ ಮಾನೆ, ಆರೋಪಿಗಳ ವಾಹನವನ್ನು ಬೆನ್ನಟ್ಟಿಕೊಂಡು ಹೋಗಿದ್ದಾರೆ. ವಿಷಯ ತಿಳಿದ ಕಾಪು ಠಾಣೆಯ ಎಸ್ಸೈ ಅಬ್ದುಲ್ ಖಾದರ್ ಕೂಡಾ ಇನ್ನೊಂದು ವಾಹನದಲ್ಲಿ ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ. ಕಾಪುವಿನ ಕೋತಲ್ ಕಟ್ಟೆಯಲ್ಲಿ ಬಳಿ ಆರೋಪಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ತಪಾಸಣೆ ಮಾಡಿದಾಗ ಮಾರಕಾಯುಧಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ದರೋಡೆ ಕೃತ್ಯಕ್ಕೆ ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ತೆರಳುತ್ತಿದ್ದರೆನ್ನಲಾಗಿದೆ. ಬಂಧಿತರ ಪೈಕಿ ಓರ್ವ ಎರಡು ವರ್ಷಗಳ ಹಿಂದೆ ಸುರತ್ಕಲ್‌ನಲ್ಲಿ ನಡೆದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

5 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago