Featured

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ – Vishwanews24

ಕಾಪು : ದಿನಸಿ ಸೇಲ್ಸ್‌ ಮೆನ್‌ ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ

ಕಾಪು : ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 2ರಂದು ನಡೆದಿದ್ದ ವ್ಯಕ್ತಿಯ ಸುಲಿಗೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂತೋಷ್ ಕುಮಾರ್ (28) ಪ್ರಕರಣದ ಬಂಧಿತ ಆರೋಪಿ. ಬಂದಿತ ಆರೋಪಿಯಿಂದ 1,00,200 ರೂ. ನಗದು, ಒಂದು ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾ.2 ರಂದು ಉಡುಪಿಯ ಸಂತೆಕಟ್ಟೆ ನಿವಾಸಿ ಉಮೇಶ್ ಪ್ರಭು ಅವರು ತಮ್ಮ ವಾಹನದಲ್ಲಿ ಸಾಮಗ್ರಿಗಳನ್ನ ತುಂಬಿಕೊಂಡು ಅಂಗಡಿಗಳಿಗೆ ಲೈನ್ ಸೇಲ್ ಮಾಡುವ ಸಲುವಾಗಿ ತೆಗೆದುಕೊಂಡು ಹೋಗಿದ್ದರು. ಬಳಿಕ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬಂದ ಹಣ 1,25,000 ರೂ. ನಗದನ್ನು ಬ್ಯಾಗಿನಲ್ಲಿ ಹಾಕಿಕೊಂಡು ವಾಪಸ್ ಆಗುತ್ತಿದ್ದರು. ಈ ವೇಳೆ ಕಾಪು ಮಾರಿಗುಡಿ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಅಲ್ಲಿಗೆ ಬಂದ ಆರೋಪಿ ಸಂತೋಷ್ ಕುಮಾರ್ ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಉಮೇಶ್ ಪ್ರಭು ಅವರ ಬಳಿಯಿದ್ದ 1,25,000 ರೂ. ಹಣ ಇದ್ದ ಬ್ಯಾಗನ್ನು ಕದ್ದು ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾಪು ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿ ಇಂದು ಆರೋಪಿಯನ್ನ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಎಸ್ ಮಾನೆ ಇವರ ನೇತೃತ್ವದಲ್ಲಿ ಕಾಪು ಠಾಣೆ ಪಿಎಸ್ಐ ಪುರುಷೋತ್ತಮ, ಅಪರಾಧ ಪತ್ತೆ ತಂಡದ ಪ್ರವೀಣ್ ಕುಮಾರ್, ಕಾಪು ಠಾಣೆಯ ನಾರಾಯಣ, ಪಡುಬಿದ್ರೆ ಠಾಣೆಯ ರಾಜೇಶ್ ಭಾಗವಹಿಸಿರುತ್ತಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

16 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

17 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

17 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

18 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

18 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

18 hours ago