ಕಾಪು : ನಕಲಿ ಮತದಾನ ಆರೋಪ : ಜಿಲ್ಲಾಧಿಕಾರಿ ಸ್ಪಷ್ಟನೆ – Vishwanews24
ಕಾಪು : ನಕಲಿ ಮತದಾನ ಆರೋಪ – ಯಾವುದೇ ನಕಲಿ ಮತದಾನ ನಡೆದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾ.ಪಂ.ನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಅನ್ಯ ವ್ಯಕ್ತಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿತ್ತು.
ಅರ್ಬಿಯ ಕೃಷ್ಣ ನಾಯಕ್ ಮತದಾನ ಮಾಡಲು ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಆದರೆ ತಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ತಿಳಿಸಿದರು.
ಪಡುಬಿದ್ರಿ: ಜಂಕ್ಷನ್ ನಲ್ಲಿ ಕೆಟ್ಟು ನಿಂತ ಸರಕು ಲಾರಿ ; ಹೆದ್ದಾರಿ ಸಂಚಾರಕ್ಕೆ ಅಡಚಣೆ – Vishwanews24
ಪಕ್ಷದ ಏಜೆಂಟ್ಗಳು ಈ ವಿಚಾರದಲ್ಲಿ ಸಂಬಂಧಪಟ್ಟ ಮತಗಟ್ಟೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಖ ನೋಡದೆ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರಿಗೆ ಮತದಾನ ಮಾಡಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಮರುಮತದಾನ ಮಾಡುವಂತೆ ಆಗ್ರಹಿಸಿದರು.
ತಪ್ಪು ಒಪ್ಪಿಕೊಂಡ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿದರು.
ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಪಡುಬಿದ್ರಿ: ಜಂಕ್ಷನ್ ನಲ್ಲಿ ಕೆಟ್ಟು ನಿಂತ ಸರಕು ಲಾರಿ ; ಹೆದ್ದಾರಿ ಸಂಚಾರಕ್ಕೆ ಅಡಚಣೆ – Vishwanews24
ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ ಗೊಂದಲ ಉಂಟಾಗಿದೆ ಎಂದರು
