Featured

ಕಾಪು : ನಕಲಿ ಮತದಾನ ಆರೋಪ : ಜಿಲ್ಲಾಧಿಕಾರಿ ಸ್ಪಷ್ಟನೆ – Vishwanews24

ಕಾಪು : ನಕಲಿ ಮತದಾನ ಆರೋಪ – ಯಾವುದೇ ನಕಲಿ ಮತದಾನ ನಡೆದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾ.ಪಂ.ನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಅನ್ಯ ವ್ಯಕ್ತಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿತ್ತು.

ಅರ್ಬಿಯ ಕೃಷ್ಣ ನಾಯಕ್‌ ಮತದಾನ ಮಾಡಲು ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಆದರೆ ತಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್‌ ತಿಳಿಸಿದರು.

ಪಕ್ಷದ ಏಜೆಂಟ್‌ಗಳು ಈ ವಿಚಾರದಲ್ಲಿ ಸಂಬಂಧಪಟ್ಟ ಮತಗಟ್ಟೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಖ ನೋಡದೆ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರಿಗೆ ಮತದಾನ ಮಾಡಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಮರುಮತದಾನ ಮಾಡುವಂತೆ ಆಗ್ರಹಿಸಿದರು.
ತಪ್ಪು ಒಪ್ಪಿಕೊಂಡ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿದರು.

ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ.

 

ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ ಗೊಂದಲ ಉಂಟಾಗಿದೆ ಎಂದರು

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

20 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

20 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago