ಕಾಪು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾ.ಪಂ.ನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಅನ್ಯ ವ್ಯಕ್ತಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿತ್ತು.
ಅರ್ಬಿಯ ಕೃಷ್ಣ ನಾಯಕ್ ಮತದಾನ ಮಾಡಲು ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಆದರೆ ತಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ತಿಳಿಸಿದರು.
ಪಕ್ಷದ ಏಜೆಂಟ್ಗಳು ಈ ವಿಚಾರದಲ್ಲಿ ಸಂಬಂಧಪಟ್ಟ ಮತಗಟ್ಟೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಖ ನೋಡದೆ ಒಬ್ಬರ ಹೆಸರಿನಲ್ಲಿ ಇನ್ನೊಬ್ಬರಿಗೆ ಮತದಾನ ಮಾಡಲು ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಮರುಮತದಾನ ಮಾಡುವಂತೆ ಆಗ್ರಹಿಸಿದರು.
ತಪ್ಪು ಒಪ್ಪಿಕೊಂಡ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿದರು.
ರಾಜೀವ ನಗರದಲ್ಲಿ ನಕಲಿ ಮತದಾನ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಸಿ. ಡಾ.ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದು, ನಕಲಿ ಮತದಾನ ನಡೆದಿಲ್ಲ ಎಂದು ತಿಳಿಸಿದ್ದಾರೆ.
ರಾಜೀವ ನಗರದಲ್ಲಿ ಯಾವುದೇ ನಕಲಿ ಮತದಾನ ನಡೆದಿಲ್ಲ. ಮಣಿಪಾಲದ ಅರ್ಬಿ ನಿವಾಸಿ ಕೃಷ್ಣ ನಾಯ್ಕ್ ಹೆಸರಲ್ಲಿ ಮತದಾನ ನಡೆದಿದ್ದು, ಒಂದೇ ಹೆಸರಿನ ಇಬ್ಬರು ಇರೋದರಿಂದ ಗೊಂದಲ ಉಂಟಾಗಿದೆ. ಒಂದೇ ಮತಗಟ್ಟೆಯಲ್ಲಿ ಕೃಷ್ಣ ನಾಯ್ಕ ಹೆಸರಿನ ಇಬ್ಬರು ಮತದಾರರು ಇದ್ದ ಕಾರಣ ವೋಟರ್ ಸ್ಲಿಪ್ ಅದಲು ಬದಲಾಗಿ ಗೊಂದಲ ಉಂಟಾಗಿದೆ ಎಂದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…