ಕಾಪು : ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಕಾಪು ಪುರಸಭಾ ಕಟ್ಟಡದಲ್ಲಿರುವ ನಗರ ಯೋಜನಾ ಪ್ರಾಧಿಕಾರದಲ್ಲಿ ಕಡತಗಳು ವಿಲೇವಾರಿಯಾಗದೆ ಹಲವು ಸಮಯಗಳಿಂದ ಬಾಕಿ ಉಳಿದಿ ರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಈ ಕುರಿತು ಕಾಪು ಜನಸಂಪರ್ಕ ಸಭೆಯಲ್ಲೂ ಆರೋಪಗಳು ಕೇಳಿ ಬಂದಿದ್ದವು.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಲೋಕಾಯುಕ್ತ ಡಿವೈಎಸ್ಪಿ ಹಾಲ ಮೂರ್ತಿ ರಾವ್ ನೇತೃತ್ವದ ತಂಡ ರಾಜ್ಯ ಲೋಕಾಯುಕ್ತದಿಂದ ಸರ್ಚ್ ವಾರೆಂಟ್ ಪಡೆದು ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಡತಗಳನ್ನು ಪರಿಶೀಲನೆ ನಡೆಸಿದ್ದು, ಇದರಲ್ಲಿ ಸಾಕಷ್ಟು ಸಮಯಗಳಿಂದ ವಿಲೇವಾರಿ ಆಗದೆ ಬಾಕಿ ಉಳಿದಿರುವ ಹಲವು ಕಡತಗಳು ಕಂಡುಬಂದಿವೆ.
ಇವುಗಳನ್ನು ಲೋಕಾಯುಕ್ತ ಪೊಲೀಸರು ದಾಖಲು ಮಾಡಿಕೊಂಡಿದ್ದು, ಈ ಕುರಿತ ವರದಿಯನ್ನು ರಾಜ್ಯ ಲೋಕಾ ಯುಕ್ತಕ್ಕೆ ಕಳುಹಿಸಿ ದೂರು ನೋಂದಾವಣಿ ಮಾಡಲಾಗುವುದು. ಮುಂದೆ ಈ ಬಗ್ಗೆ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮಕ್ಕೆ ಸರಕಾರಕ್ಕೆ ಶಿಫಾರಸ್ಸು ಮಾಡ ಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕಾಯುಕ್ತ ನಿರೀಕ್ಷಕರುಗಳಾದ ಮಂಜುನಾಥ್, ರಾಜೇಂದ್ರ ನಾಯ್ಕ್ ಎಂ.ಎನ್. ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…