Featured

ಕಾಪು : ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ :ಗುರ್ಮೆ ಸುರೇಶ್‌ ಶೆಟ್ಟಿ – Vishwanews24

ಕಾಪು : ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ :ಗುರ್ಮೆ ಸುರೇಶ್‌ ಶೆಟ್ಟಿ

ಕಾಪು : ಕಾಪು ಕ್ಷೇತ್ರ ನನ್ನ ಹುಟ್ಟೂರು. ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಮಾಜ ಸೇವೆಯ ಮೂಲಕವಾಗಿ ಬೆಳೆದು ಬಂದಿರುವ ನನಗೆ ಬಿಜೆಪಿ ರಾಜಕೀಯ ಶಕ್ತಿ ಕೊಟ್ಟು ಶಾಸಕನಾಗಿ ಸ್ಪರ್ಧಿಸಲು ಅವಕಾಶ ಕೊಟ್ಟು, ಜನರ ಸಮಸ್ಯೆಗಳಿಗೆ ಸ್ಪಂಧಿಸುವ ದಾರಿಯನ್ನು ತೋರಿಸಿಕೊಟ್ಟಿದೆ. ನನ್ನ ಊರಿನ ಜನತೆ ನನ್ನ ಗೆಲುವಿಗಾಗಿ ಕೈ ಜೋಡಿಸಿದರೆ, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರನ್ನು ಎಲ್ಲಿಯೂ ಸೋಲಲು ಬಿಡಲಾರೆ, ತಲೆ ತಗ್ಗಿಸಲು ಬಿಡುವುದಿಲ್ಲ. ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಜನಸೇವೆ ಮಾಡುತ್ತೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದರು.

ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಮತಯಾಚನೆ ನಡೆಸಿ, ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಪು ವಿಧಾನಸಭಾ ಕ್ಷೇತ್ರವು ಕೋಸ್ಟಲ್‌ ಟೂರಿಸಂ, ಟೆಂಪಲ್‌ ಟೂರಿಸಂ, ಕೈಗಾರಿಕೆ ಮತ್ತು ಶೈಕ್ಷಣಿಕ ಹಬ್‌ಗ ಪ್ರಸಿದ್ಧಿ ಪಡೆಯುತ್ತಿದೆ. ಇಷ್ಟೆಲ್ಲಾ ವ್ಯವಸ್ಥೆಗಳಿದ್ದರೂ ನಮ್ಮ ಯುವಕರು ಉದ್ಯೋಗ ಅರಸಿ ಹೊರ ಜಿಲ್ಲೆ, ರಾಜ್ಯ, ರಾಷ್ಟ್ರಗಳಿಗೆ ತೆರಳುವಂತಾಗಿದೆ. ಕಾಪು ಕ್ಷೇತ್ರದಲ್ಲಿ ಬಲವಾಗಿರುವ ಕೋಸ್ಟಲ್‌ ಟೂರಿಸಂ, ಟೆಂಪಲ್‌ ಟೂರಿಸಂ, ಕೈಗಾರಿಕೆ ಮತ್ತು ಶೈಕ್ಷಣಿಕ ಹಬ್‌ಗಳಲ್ಲಿ ನಮ್ಮ ಊರಿನ ಯುವಕ-ಯುವತಿಯರಿಗೆ ಆದ್ಯತೆಯಡಿ ಕೆಲಸ ದೊರಕಿಸಿಕೊಡುವ ಮೂಲಕ ನಿರುದ್ಯೋಗ ನಿವಾರಣೆಗೆ ವಿಶೇಷ ಪ್ರಯತ್ನ ನಡೆಸುವುದಾಗಿ ಗುರ್ಮೆ ಸುರೇಶ್‌ ಶೆಟ್ಟಿ ಭರವಸೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

14 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

15 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago