ಕಾಪು : ಕಾಪು ಕ್ಷೇತ್ರ ನನ್ನ ಹುಟ್ಟೂರು. ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಮಾಜ ಸೇವೆಯ ಮೂಲಕವಾಗಿ ಬೆಳೆದು ಬಂದಿರುವ ನನಗೆ ಬಿಜೆಪಿ ರಾಜಕೀಯ ಶಕ್ತಿ ಕೊಟ್ಟು ಶಾಸಕನಾಗಿ ಸ್ಪರ್ಧಿಸಲು ಅವಕಾಶ ಕೊಟ್ಟು, ಜನರ ಸಮಸ್ಯೆಗಳಿಗೆ ಸ್ಪಂಧಿಸುವ ದಾರಿಯನ್ನು ತೋರಿಸಿಕೊಟ್ಟಿದೆ. ನನ್ನ ಊರಿನ ಜನತೆ ನನ್ನ ಗೆಲುವಿಗಾಗಿ ಕೈ ಜೋಡಿಸಿದರೆ, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರನ್ನು ಎಲ್ಲಿಯೂ ಸೋಲಲು ಬಿಡಲಾರೆ, ತಲೆ ತಗ್ಗಿಸಲು ಬಿಡುವುದಿಲ್ಲ. ಸತ್ಯ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಜನಸೇವೆ ಮಾಡುತ್ತೇನೆ ಎಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಮತಯಾಚನೆ ನಡೆಸಿ, ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಪು ವಿಧಾನಸಭಾ ಕ್ಷೇತ್ರವು ಕೋಸ್ಟಲ್ ಟೂರಿಸಂ, ಟೆಂಪಲ್ ಟೂರಿಸಂ, ಕೈಗಾರಿಕೆ ಮತ್ತು ಶೈಕ್ಷಣಿಕ ಹಬ್ಗ ಪ್ರಸಿದ್ಧಿ ಪಡೆಯುತ್ತಿದೆ. ಇಷ್ಟೆಲ್ಲಾ ವ್ಯವಸ್ಥೆಗಳಿದ್ದರೂ ನಮ್ಮ ಯುವಕರು ಉದ್ಯೋಗ ಅರಸಿ ಹೊರ ಜಿಲ್ಲೆ, ರಾಜ್ಯ, ರಾಷ್ಟ್ರಗಳಿಗೆ ತೆರಳುವಂತಾಗಿದೆ. ಕಾಪು ಕ್ಷೇತ್ರದಲ್ಲಿ ಬಲವಾಗಿರುವ ಕೋಸ್ಟಲ್ ಟೂರಿಸಂ, ಟೆಂಪಲ್ ಟೂರಿಸಂ, ಕೈಗಾರಿಕೆ ಮತ್ತು ಶೈಕ್ಷಣಿಕ ಹಬ್ಗಳಲ್ಲಿ ನಮ್ಮ ಊರಿನ ಯುವಕ-ಯುವತಿಯರಿಗೆ ಆದ್ಯತೆಯಡಿ ಕೆಲಸ ದೊರಕಿಸಿಕೊಡುವ ಮೂಲಕ ನಿರುದ್ಯೋಗ ನಿವಾರಣೆಗೆ ವಿಶೇಷ ಪ್ರಯತ್ನ ನಡೆಸುವುದಾಗಿ ಗುರ್ಮೆ ಸುರೇಶ್ ಶೆಟ್ಟಿ ಭರವಸೆ ನೀಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…