ಕಾಪು: ತರಕಾರಿ ತರುವುದಾಗಿ ಹೇಳಿ ಪೇಟೆಗೆ ತೆರಳಿ, ಬಳಿಕ ನಾಪತ್ತೆಯಾಗಿದ್ದ ಮೂಲತಃ ಕುಂಜೂರು ನಿವಾಸಿ, ಪ್ರಸ್ತುತ ಕಾಪು ಉಳಿಯಾರಗೋಳಿಯಲ್ಲಿ ವಾಸವಿರುವ ರಾಮ ದೇವಾಡಿಗ (64) ಅವರು ಮುಂಬಯಿಯಲ್ಲಿ ಪತ್ತೆಯಾಗಿದ್ದಾರೆ.
ಎರಡು ತಿಂಗಳ ಹಿಂದೆ ದುಬಾೖನಿಂದ ಮರಳಿದ್ದ ಅವರು ಕಾಪು ಪೇಟೆಯಲ್ಲಿ ಚಹಾ ಮಾರುತ್ತಿದ್ದು, ಜ. 10ರಂದು ಮಧ್ಯಾಹ್ನ 1 ಗಂಟೆಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಶಾಲಿನಿ ಕಾಪು ಪೊಲೀಸ್ ಠಾಣೆಗೆ ನೀಡಿದ್ದರು.
ನಾಲ್ಕೈದು ದಿನಗಳಿಂದ ನಾಪತ್ತೆಯಾಗಿದ್ದ ಅವರನ್ನು ಮುಂಬಯಿಯ ವರ್ಲಿ ಸೆಂಚುರಿ ಬಜಾರ್ನಲ್ಲಿರುವ ಮೋಡರ್ನ್ ಕೆಫೆಯಲ್ಲಿ ಮುಂಬಯಿಯಲ್ಲಿರುವ ಕುಂಜೂರು ಕಟ್ಟಪುಣಿ ನಿವಾಸಿ ಚಂದ್ರ ದೇವಾಡಿಗ ಅವರು ಗುರುತು ಹಿಡಿದಿದ್ದರು. ಬಳಿಕ ಊರಿನಲ್ಲಿರುವ ಸಹೋದರನಿಗೆ ಅವರು ಮಾಹಿತಿ ನೀಡಿದ್ದಾರೆ.
ಸಂಬಂಧಿಕರು ಅವರನ್ನು ಊರಿಗೆ ಕರೆದುಕೊಂಡು ಬಂದಿದ್ದು, ಪೊಲೀಸರ ಮುಂದೆ ಹಾಜರುಪಡಿಸಿ ನಾಪತ್ತೆ ಪ್ರಕರಣ ಸುಖಾಂತ್ಯಗೊಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…