Featured

ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ – ಸ್ವರ್ಣ ಸಮರ್ಪಣಾ ಸಮಾರಂಭ  – vishwanews24

ಕಾಪು : ನಾಳೆ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ :ಸ್ವರ್ಣ ಗೌರಿ ಪೂಜೆ-ಸ್ವರ್ಣ ಸಮರ್ಪಣಾ ಸಮಾರಂಭ

ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಸಿಗಲಿದೆ.

ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವಿದ್ವಾನ್ ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ, ಶಿಲಾ ಸೇವೆ, ಶಿಲಾ ಕಂಬ ಸಮರ್ಪಿಸಿದ ದಾನಿಗಳು, ಭಕ್ತರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಜೂ. 25 ರಂದು ಬೆಳಿಗ್ಗೆ 9.09 ಕ್ಕೆ ಸ್ವರ್ಣ ಗೌರಿ ಪೂಜೆ ನೆರವೇರಿಸಿ, ಬಳಿಕ ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ನೀಡಲಾಗುವುದು.

20 ಕೆಜಿ‌ ಸ್ವರ್ಣ, 160 ಕೆಜಿ ಬೆಳ್ಳಿ : ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿ ಉಪಯೋಗಿಸಲಾಗುತ್ತದೆ ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆನ್ನುವುದು ಸಮಿತಿಯ ಆಶಯವಾಗಿದೆ.

ಬಳಸಿದ ಚಿನ್ನ ಸಮರ್ಪಣೆಗೂ ಅವಕಾಶ : ಗದ್ದುಗೆಯೇ ಪ್ರಧಾನವಾಗಿರುವ ಕಾಪು‌ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ. ಸಮಿತಿಯ ಸಂಕಲ್ಪಕ್ಕೆ ಮಾರಿಯಮ್ಮ ದೇವಿಯ ಅಭಯವೂ ಸಿಕ್ಕಿದ್ದು ಸ್ವರ್ಣ ನೀಡಿದ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ತನ್ನ ಕಾಲಬುಡಕ್ಕೆ ಹಾಕಿಕೊಳ್ಳುವುದಾಗಿ ಅಮ್ಮನ ನುಡಿಯಾಗಿದೆ .

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago