Featured

ಕಾಪು: ನಿಗದಿತ ಸಮಯದೊಳಗೆ ಕಟಪಾಡಿ ರಾಹೆ. ಫ್ಲೈಓವರ್ ಕಾಮಗಾರಿ ಪೂರ್ಣ : ಸಂಸದ ಕೋಟ ಭರವಸೆ – vishwanews24

ಕಾಪು: ನಿಗದಿತ ಸಮಯದೊಳಗೆ ಕಟಪಾಡಿ ರಾಹೆ. ಫ್ಲೈಓವರ್ ಕಾಮಗಾರಿ ಪೂರ್ಣ : ಸಂಸದ ಕೋಟ ಭರವಸೆ

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‌ನಲ್ಲಿ ನಿರ್ಮಿಸಲಾಗುತ್ತಿರುವ ಫ್ಲೈಓವರ್ ಕಾಮಗಾರಿಯು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ನಿರ್ಮಾಣ ಹಂತದಲ್ಲಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಮಗಾರಿಯು ತೃಪ್ತಿಕರ ವೇಗದಲ್ಲಿ ಸಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವ ಹಾದಿಯಲ್ಲಿದೆ ಎಂದರು.

“ಮಾರ್ಚ್ ಕೊನೆಯ ವಾರದೊಳಗೆ ರಸ್ತೆಯ ಒಂದು ಬದಿಯ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ. ಒಮ್ಮೆ ಹೊಸ ರಸ್ತೆಯಲ್ಲಿ ಸಂಚಾರ ಆರಂಭವಾದರೆ, ನಂತರ ಇನ್ನೊಂದು ಬದಿಯ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುವುದು. ಒಟ್ಟಾರೆಯಾಗಿ ಯೋಜನೆಯು ಪ್ರಾರಂಭವಾದ ದಿನದಿಂದ 11 ತಿಂಗಳೊಳಗೆ ಪೂರ್ಣಗೊಳ್ಳುವ ಗುರಿ ಹೊಂದಿದೆ” ಎಂದು ತಿಳಿಸಿದರು.

“ಕೆಲಸವು ಅತ್ಯಂತ ವೇಗವಾಗಿ ಮತ್ತು ತೃಪ್ತಿಕರವಾಗಿ ನಡೆಯುತ್ತಿದೆ. ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ನಿಗದಿತ ಸಮಯದೊಳಗೆ ಯೋಜನೆಯನ್ನು ಮುಗಿಸುವಂತೆ ನಾನು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ” ಎಂದರು.

ಸ್ಥಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗುವಂತೆ ನೋಡಿಕೊಂಡು ಕಾಮಗಾರಿಯನ್ನು ತ್ವರಿತಗೊಳಿಸಲು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕಿ ಗೀತಾಂಜಲಿ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಪವಿತ್ರ ಶೆಟ್ಟಿ, ಸವಿತಾ ಅಶೋಕ್ ಶೆಟ್ಟಿ, ಸುಭಾಸ್ ಬಲ್ಲಾಳ್, ಮೊಯ್ಗಿನ್ ಸಾಹೇಬ್, ಕಟಪಾಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ದಯಾನಂದ್, ಹಾಗೂ ಸ್ಥಳೀಯ ಮುಖಂಡರಾದ ಮುರಲೀಧರ ಪೈ, ಸಂತೋಷ್, ಹರ್ಷಿತ್, ನಿತಿನ್ ವಿ. ಶೇರಿಗಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago