ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ (85) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು.
18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಅಬ್ದುರಝಾಕ್ ಶಾಬಾನ್ ಅವರು ಎರಡು ವರ್ಷ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮ್ಯುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮ್ಯುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು
ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರಾ ಹಾಗೂ ಹಿಮಾಲಯದ ತಪ್ಪಲಿನ ಲಡಾಖ್ ಸೇನಾ ನೆಲೆಯಲ್ಲೂ ಕಾರ್ಯಾಚರಣೆ ನಡೆಸಿದ್ದರು. 1962ರ ಚೀನಾ ಯುದ್ಧ 1965ರ ಪಾಕಿಸ್ತಾನ ಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್ಗಳಿಂದ ಪುರಸ್ಕೃತರಾದರು.
ಸುರತ್ಕಲ್ : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್ – Vishwanews24
1975ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧಾರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು. ಮೂಳೂರಿನ ಮಸೀದಿಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಸಕ್ತ ಕುಟುಂಬಗಳಿಗೆ ಧನಸಹಾಯ ನೀಡುತ್ತಿದ್ದರು.ಹಾಜಿ ಅಬು ರಝಾಕ್ ಶಾಬಾನ್ ಅವರು ಪತ್ನಿ ಗಂಡು ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…