ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ (85) ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನ ಹೊಂದಿದರು.
18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಅಬ್ದುರಝಾಕ್ ಶಾಬಾನ್ ಅವರು ಎರಡು ವರ್ಷ ಬೆಂಗಳೂರಿನ ಏರ್ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮ್ಯುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮ್ಯುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು
ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರಾ ಹಾಗೂ ಹಿಮಾಲಯದ ತಪ್ಪಲಿನ ಲಡಾಖ್ ಸೇನಾ ನೆಲೆಯಲ್ಲೂ ಕಾರ್ಯಾಚರಣೆ ನಡೆಸಿದ್ದರು. 1962ರ ಚೀನಾ ಯುದ್ಧ 1965ರ ಪಾಕಿಸ್ತಾನ ಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್ಗಳಿಂದ ಪುರಸ್ಕೃತರಾದರು.
ಸುರತ್ಕಲ್ : ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ತುಂಬಾ ರಾಶಿ ರಾಶಿ ಮೀನು.. ಮೀನುಗಾರರು ಫುಲ್ ಖುಷ್ – Vishwanews24
1975ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧಾರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು. ಮೂಳೂರಿನ ಮಸೀದಿಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಸಕ್ತ ಕುಟುಂಬಗಳಿಗೆ ಧನಸಹಾಯ ನೀಡುತ್ತಿದ್ದರು.ಹಾಜಿ ಅಬು ರಝಾಕ್ ಶಾಬಾನ್ ಅವರು ಪತ್ನಿ ಗಂಡು ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…