ಕಾಪು ಪಡುಬಿದ್ರೆ, : ತೈಲ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ನೀಡಿರುವ ಬಂದ್ ಕರೆಗೆ ಕಾಪು ಹಾಗೂ ಪಡುಬಿದ್ರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾಪು, ಉಚ್ಚಿಲ, ಎರ್ಮಾಳು, ಪಡುಬಿದ್ರೆ, ಪಲಿಮಾರು, ಮುದರಂಗಡಿಯಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿತ್ತು. ಕಾಪು ಹಾಗೂ ಪಡುಬಿದ್ರೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಂಗಡಿ ಮಾಲಕರಿಗೆ, ರಿಕ್ಷಾ, ಕಾರು ಚಾಲಕರಿಗೆ ಬಂದ್ ನಡೆಸುವಂತೆ ಮನವಿ ಮಾಡಿದರು. ಇವರ ಮನವಿಗೆ ಸ್ಪಂದಿಸಿ ಕೆಲವಡೆಗಳಲ್ಲಿ ಅಂಗಡಿಮುಂಗಟ್ಟುಗಳು ಬಳಿಕ ಮುಚ್ಚಲ್ಪಟ್ಟವು. ಕೆಲ ಸಮಯದ ಬಳಿಕ ಮತ್ತೆ ಕೆಲವು ಅಂಗಡಿ ಮಾಲಕರು ಅಂಗಡಿಗಳನ್ನು ತೆರೆದು ವ್ಯಾಪಾರ ಆರಂಭಿಸಿದರು.
ಕಾಪು ಪೊಲಿಪುವಿನ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಾಜಿ ಶಾಸಕ ವಿನಯಕುಮಾರ್ ನೇತೃತ್ವದಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲ ಬೆಲೆ ಏರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…