ಕಾಪು ಪಡುಬಿದ್ರೆ, : ತೈಲ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ನೀಡಿರುವ ಬಂದ್ ಕರೆಗೆ ಕಾಪು ಹಾಗೂ ಪಡುಬಿದ್ರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾಪು, ಉಚ್ಚಿಲ, ಎರ್ಮಾಳು, ಪಡುಬಿದ್ರೆ, ಪಲಿಮಾರು, ಮುದರಂಗಡಿಯಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿತ್ತು. ಕಾಪು ಹಾಗೂ ಪಡುಬಿದ್ರೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಂಗಡಿ ಮಾಲಕರಿಗೆ, ರಿಕ್ಷಾ, ಕಾರು ಚಾಲಕರಿಗೆ ಬಂದ್ ನಡೆಸುವಂತೆ ಮನವಿ ಮಾಡಿದರು. ಇವರ ಮನವಿಗೆ ಸ್ಪಂದಿಸಿ ಕೆಲವಡೆಗಳಲ್ಲಿ ಅಂಗಡಿಮುಂಗಟ್ಟುಗಳು ಬಳಿಕ ಮುಚ್ಚಲ್ಪಟ್ಟವು. ಕೆಲ ಸಮಯದ ಬಳಿಕ ಮತ್ತೆ ಕೆಲವು ಅಂಗಡಿ ಮಾಲಕರು ಅಂಗಡಿಗಳನ್ನು ತೆರೆದು ವ್ಯಾಪಾರ ಆರಂಭಿಸಿದರು.
ಕಾಪು ಪೊಲಿಪುವಿನ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಾಜಿ ಶಾಸಕ ವಿನಯಕುಮಾರ್ ನೇತೃತ್ವದಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲ ಬೆಲೆ ಏರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…