ಕಾಪು ಪಡುಬಿದ್ರೆ, : ತೈಲ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳು ನೀಡಿರುವ ಬಂದ್ ಕರೆಗೆ ಕಾಪು ಹಾಗೂ ಪಡುಬಿದ್ರೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಾಪು, ಉಚ್ಚಿಲ, ಎರ್ಮಾಳು, ಪಡುಬಿದ್ರೆ, ಪಲಿಮಾರು, ಮುದರಂಗಡಿಯಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿತ್ತು. ಕಾಪು ಹಾಗೂ ಪಡುಬಿದ್ರೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಂಗಡಿ ಮಾಲಕರಿಗೆ, ರಿಕ್ಷಾ, ಕಾರು ಚಾಲಕರಿಗೆ ಬಂದ್ ನಡೆಸುವಂತೆ ಮನವಿ ಮಾಡಿದರು. ಇವರ ಮನವಿಗೆ ಸ್ಪಂದಿಸಿ ಕೆಲವಡೆಗಳಲ್ಲಿ ಅಂಗಡಿಮುಂಗಟ್ಟುಗಳು ಬಳಿಕ ಮುಚ್ಚಲ್ಪಟ್ಟವು. ಕೆಲ ಸಮಯದ ಬಳಿಕ ಮತ್ತೆ ಕೆಲವು ಅಂಗಡಿ ಮಾಲಕರು ಅಂಗಡಿಗಳನ್ನು ತೆರೆದು ವ್ಯಾಪಾರ ಆರಂಭಿಸಿದರು.
ಕಾಪು ಪೊಲಿಪುವಿನ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಾಜಿ ಶಾಸಕ ವಿನಯಕುಮಾರ್ ನೇತೃತ್ವದಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ತೈಲ ಬೆಲೆ ಏರಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…