ಕಾಪು ತಾಲೂಕು ಬೆಳಪು ಗ್ರಾಮ ಈಗಾಗಲೇ ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು ಇದಕ್ಕೆ ಪೂರಕವಾಗಿ ಉಚ್ಚಿಲ-ಪಣಿಯೂರು ರಸ್ತೆ ೯ ಮೀ ಅಗಲೀಕರಣಗೊಳಿಸಲಾಗಿದ್ದು, ಪಣಿಯೂರು ಬೆಳಪು ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಸಭೆ ನಡೆಸಲಾಯಿತು.
ಬೆಳಪು-ಪಣಿಯೂರು ರಸ್ತೆ ಅಭಿವೃದ್ಧಿಗೆ ಹಾಗೂ ೭ ಮೀ. ಅಗಲೀಕರಣಗೊಳಿಸಿ ಚರಂಡಿ ನಿರ್ಮಿಸಲು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸುಮಾರು ೬.೦೦ ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಗ್ರಾಮದ ಅನೇಕ ರೈತಾಪಿ ಜನರು ಭೂಮಿ ನೀಡಬೇಕಾಗಿದ್ದು ಇದಕ್ಕೆ ಈಗಾಗಲೇ ಸರ್ವೆ ನಡೆಸಿ ಗಡಿ ಗುರುತು ಮಾಡಿ ರೈತರ ಬೆಳೆಗಳಿಗೆ, ತೆಂಗು, ಮರ, ಕಟ್ಟಡಗಳಿಗೆ ಹಾಗೂ ಈ ಹಿಂದೆ ನೀಡಿರುವ ರಸ್ತೆ ಸೇರಿ ಈಗಿನ ಭೂಸ್ವಾದೀನವನ್ನು ಸೇರಿಸಿ ಮಾರುಕಟ್ಟೆ ಧಾರಣೆಯ ಉತ್ತಮ ಬೆಲೆ ನೀಡುವಂತೆ ದೇವಿಪ್ರಸಾದ್ ಶೆಟ್ಟಿಯವರು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ತಿಳಿಸಿದರು. ಸಂತ್ರಸ್ತರೆಲ್ಲರೂ ಗ್ರಾಮದ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಂತ್ರಸ್ತರು ದಾಖಲೆ ನೀಡಿದ ತಕ್ಷಣ ಪರಿಹಾರ ನೀಡುವುದಾಗಿ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ರಸ್ತೆ ಅಭಿವೃದ್ಧಿ ಸಂಸದರ ನಿಧಿಯಿಂದ : ಶೆಟ್ಟಿ
ಸದ್ರಿ ರಸ್ತೆ ಅಗಲೀಕರಣಗೊಳಿಸಿ ರೂ.೬.೦೦ ಕೋಟಿ ವೆಚ್ಚವನ್ನು ಸಣ್ಣ ಕೈಗಾರಿಕಾ ಮಾಲೀಕರು ಭರಿಸುವಂತೆ ತಿಳಿಸಿರುವ ಅಧಿಕಾರಿಯ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ದೇವಿಪ್ರಸಾದ್ ಶೆಟ್ಟಿಯವರು ಈಗಾಗಲೇ ಕೈಗಾರಿಕ ಮಾಲಿಕರು ಕೊರೋನಾದಿಂದ ಕೈ ಸುಟ್ಟುಕೊಂಡು ಕಂಗಾಲಾಗಿದ್ದಾರೆ. ನಮ್ಮ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನಾನು ಮನವಿ ಮಾಡಿದ್ದೇನೆ. ಅವರು ಸಡಕ್ ಯೋಜನೆ ಮೂಲಕ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಇದಕ್ಕೆ ಸ್ಪಂದಿಸಿದ್ದಾರೆ0ದು ಶೆಟ್ಟಿ ತಿಳಿಸಿದ್ದಾರೆ.
ಸಭೆಯಲ್ಲಿ ಭೂಸ್ವಾಧೀನಧಿಕಾರಿಯಾದ ಆಸೀಫ್, ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶರತ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಡಿ’ಸೋಜ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…