ಕಾಪು ತಾಲೂಕು ಬೆಳಪು ಗ್ರಾಮ ಈಗಾಗಲೇ ಕೈಗಾರಿಕೆ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು ಇದಕ್ಕೆ ಪೂರಕವಾಗಿ ಉಚ್ಚಿಲ-ಪಣಿಯೂರು ರಸ್ತೆ ೯ ಮೀ ಅಗಲೀಕರಣಗೊಳಿಸಲಾಗಿದ್ದು, ಪಣಿಯೂರು ಬೆಳಪು ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಲು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಸಭೆ ನಡೆಸಲಾಯಿತು.
ಬೆಳಪು-ಪಣಿಯೂರು ರಸ್ತೆ ಅಭಿವೃದ್ಧಿಗೆ ಹಾಗೂ ೭ ಮೀ. ಅಗಲೀಕರಣಗೊಳಿಸಿ ಚರಂಡಿ ನಿರ್ಮಿಸಲು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸುಮಾರು ೬.೦೦ ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಗ್ರಾಮದ ಅನೇಕ ರೈತಾಪಿ ಜನರು ಭೂಮಿ ನೀಡಬೇಕಾಗಿದ್ದು ಇದಕ್ಕೆ ಈಗಾಗಲೇ ಸರ್ವೆ ನಡೆಸಿ ಗಡಿ ಗುರುತು ಮಾಡಿ ರೈತರ ಬೆಳೆಗಳಿಗೆ, ತೆಂಗು, ಮರ, ಕಟ್ಟಡಗಳಿಗೆ ಹಾಗೂ ಈ ಹಿಂದೆ ನೀಡಿರುವ ರಸ್ತೆ ಸೇರಿ ಈಗಿನ ಭೂಸ್ವಾದೀನವನ್ನು ಸೇರಿಸಿ ಮಾರುಕಟ್ಟೆ ಧಾರಣೆಯ ಉತ್ತಮ ಬೆಲೆ ನೀಡುವಂತೆ ದೇವಿಪ್ರಸಾದ್ ಶೆಟ್ಟಿಯವರು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ತಿಳಿಸಿದರು. ಸಂತ್ರಸ್ತರೆಲ್ಲರೂ ಗ್ರಾಮದ ಅಭಿವೃದ್ಧಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಂತ್ರಸ್ತರು ದಾಖಲೆ ನೀಡಿದ ತಕ್ಷಣ ಪರಿಹಾರ ನೀಡುವುದಾಗಿ ಕೆ.ಐ.ಎ.ಡಿ.ಬಿ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ರಸ್ತೆ ಅಭಿವೃದ್ಧಿ ಸಂಸದರ ನಿಧಿಯಿಂದ : ಶೆಟ್ಟಿ
ಸದ್ರಿ ರಸ್ತೆ ಅಗಲೀಕರಣಗೊಳಿಸಿ ರೂ.೬.೦೦ ಕೋಟಿ ವೆಚ್ಚವನ್ನು ಸಣ್ಣ ಕೈಗಾರಿಕಾ ಮಾಲೀಕರು ಭರಿಸುವಂತೆ ತಿಳಿಸಿರುವ ಅಧಿಕಾರಿಯ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ದೇವಿಪ್ರಸಾದ್ ಶೆಟ್ಟಿಯವರು ಈಗಾಗಲೇ ಕೈಗಾರಿಕ ಮಾಲಿಕರು ಕೊರೋನಾದಿಂದ ಕೈ ಸುಟ್ಟುಕೊಂಡು ಕಂಗಾಲಾಗಿದ್ದಾರೆ. ನಮ್ಮ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ನಾನು ಮನವಿ ಮಾಡಿದ್ದೇನೆ. ಅವರು ಸಡಕ್ ಯೋಜನೆ ಮೂಲಕ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಇದಕ್ಕೆ ಸ್ಪಂದಿಸಿದ್ದಾರೆ0ದು ಶೆಟ್ಟಿ ತಿಳಿಸಿದ್ದಾರೆ.
ಸಭೆಯಲ್ಲಿ ಭೂಸ್ವಾಧೀನಧಿಕಾರಿಯಾದ ಆಸೀಫ್, ಪಂಚಾಯತ್ ಸದಸ್ಯರಾದ ಪ್ರಕಾಶ್ ರಾವ್, ಶರತ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಡಿ’ಸೋಜ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…