Featured

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ – vishwanews24

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ

ಕಾಪು : ಪಣಿಯೂರು (ಪಡುಬಿದ್ರಿ) ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಮಂಗಳೂರು – ಮಡಂಗಾವ್ (ಗೋವಾ) ಎಕ್ಸ್‌ಪ್ರೆಸ್ ರೈಲು ನಿಲುಗಡೆ ಸೋಮವಾರ(ಜು.28) ಆರಂಭಗೊಂಡಿದೆ.

ಬೆಳಪು ಗ್ರಾ‌ಮ ಪಂಚಾಯತ್ ಅಧ್ಯಕ್ಷ, ರೈಲು‌ ನಿಲುಗಡೆ ಹೋರಾಟ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಪಣಿಯೂರು ರೈಲು‌ ನಿಲ್ದಾಣದಲ್ಲಿ ನಿಲುಗಡೆಗೊಂಡ ಮೆಮು ರೈಲನ್ನು‌ ಸ್ವಾಗತಿಸಲಾಯಿತು.

ಗೋವಾದಿಂದ ರೈಲು ಚಲಾಯಿಸಿಕೊಂಡು ಬಂದ ಚಾಲಕರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಪಣಿಯೂರು ರೈಲು‌‌‌ ನಿಲ್ದಾಣದ ಅಭಿವೃದ್ಧಿ, ಗೋವಾ ಎಕ್ಸ್‌ಪ್ರೆಸ್‌, ಮುಂಬಯಿ, ಬೆಂಗಳೂರು ರೈಲು ನಿಲಗಡೆಗೆ ಅವಕಾಶ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆ ನೀಡುತ್ತಾ ಬಂದಿದ್ದೇವೆ. ನಮ್ಮ ಹೋರಾಟಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಬಲ ನೀಡಿದ್ದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಮೂಲಕವಾಗಿ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದರು.

ರೈಲು ನಿಲ್ದಾಣ ಅಭಿವೃದ್ದಿಗೆ ಪೂರಕವಾಗಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅದಾನಿ ಸಿಎಸ್ಆರ್ ಅನುದಾನದಲ್ಲಿ 15 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದ್ದು ಮುಂದುವರಿದ ಕಾಮಗಾರಿಗೆ ಮತ್ತೆ 20 ಲಕ್ಷ ರೂ. ಸಿಎಸ್ಆರ್ ಅನುದಾನ ಬಳಸಲಾಗುವುದು. ಸೋಲಾರ್ ದೀಪಗಳ‌ ಅಳವಡಿಕೆಗೂ ಒತ್ತು ನೀಡಲಾಗುವುದು ಎಂದರು.

ಹೋರಾಟ ಸಮಿತಿಯ ರಾಕೇಶ್, ಗ್ರಾಮಸ್ಥರು, ರೈಲ್ವೇ ಸ್ಟೇಷನ್ ಮಾಸ್ಟರ್ ಶಂಕರನ್, ಸಿಬಂದಿಗಳಾದ ಸುಜಿತ್, ಆದೇಶ್ ಹೆಗ್ಡೆ, ಲಲಿತಾ, ಶಾಂತ, ರಿಕ್ಷಾ ಚಾಲಕರು ಉಪಸ್ಥಿತರಿದ್ದರು. ‌

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago