Featured

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ – vishwanews24

ಕಾಪು : ಪಣಿಯೂರು ರೈಲು ನಿಲ್ದಾಣದಲ್ಲಿ ಮಂಗಳೂರು – ಗೋವಾ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ಆರಂಭ

ಕಾಪು : ಪಣಿಯೂರು (ಪಡುಬಿದ್ರಿ) ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಮಂಗಳೂರು – ಮಡಂಗಾವ್ (ಗೋವಾ) ಎಕ್ಸ್‌ಪ್ರೆಸ್ ರೈಲು ನಿಲುಗಡೆ ಸೋಮವಾರ(ಜು.28) ಆರಂಭಗೊಂಡಿದೆ.

ಬೆಳಪು ಗ್ರಾ‌ಮ ಪಂಚಾಯತ್ ಅಧ್ಯಕ್ಷ, ರೈಲು‌ ನಿಲುಗಡೆ ಹೋರಾಟ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಪಣಿಯೂರು ರೈಲು‌ ನಿಲ್ದಾಣದಲ್ಲಿ ನಿಲುಗಡೆಗೊಂಡ ಮೆಮು ರೈಲನ್ನು‌ ಸ್ವಾಗತಿಸಲಾಯಿತು.

ಗೋವಾದಿಂದ ರೈಲು ಚಲಾಯಿಸಿಕೊಂಡು ಬಂದ ಚಾಲಕರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಪಣಿಯೂರು ರೈಲು‌‌‌ ನಿಲ್ದಾಣದ ಅಭಿವೃದ್ಧಿ, ಗೋವಾ ಎಕ್ಸ್‌ಪ್ರೆಸ್‌, ಮುಂಬಯಿ, ಬೆಂಗಳೂರು ರೈಲು ನಿಲಗಡೆಗೆ ಅವಕಾಶ ನೀಡುವಂತೆ ಹಲವು ವರ್ಷಗಳಿಂದ ಬೇಡಿಕೆ ನೀಡುತ್ತಾ ಬಂದಿದ್ದೇವೆ. ನಮ್ಮ ಹೋರಾಟಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಬೆಂಬಲ ನೀಡಿದ್ದು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರ ಮೂಲಕವಾಗಿ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದರು.

ರೈಲು ನಿಲ್ದಾಣ ಅಭಿವೃದ್ದಿಗೆ ಪೂರಕವಾಗಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಅದಾನಿ ಸಿಎಸ್ಆರ್ ಅನುದಾನದಲ್ಲಿ 15 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದ್ದು ಮುಂದುವರಿದ ಕಾಮಗಾರಿಗೆ ಮತ್ತೆ 20 ಲಕ್ಷ ರೂ. ಸಿಎಸ್ಆರ್ ಅನುದಾನ ಬಳಸಲಾಗುವುದು. ಸೋಲಾರ್ ದೀಪಗಳ‌ ಅಳವಡಿಕೆಗೂ ಒತ್ತು ನೀಡಲಾಗುವುದು ಎಂದರು.

ಹೋರಾಟ ಸಮಿತಿಯ ರಾಕೇಶ್, ಗ್ರಾಮಸ್ಥರು, ರೈಲ್ವೇ ಸ್ಟೇಷನ್ ಮಾಸ್ಟರ್ ಶಂಕರನ್, ಸಿಬಂದಿಗಳಾದ ಸುಜಿತ್, ಆದೇಶ್ ಹೆಗ್ಡೆ, ಲಲಿತಾ, ಶಾಂತ, ರಿಕ್ಷಾ ಚಾಲಕರು ಉಪಸ್ಥಿತರಿದ್ದರು. ‌

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

53 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

2 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago