ಕಾಪು : ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಶ್ ಫ್ಯಾಕ್ಟರಿಗೆ ಬೀಗ ಜಡಿಯಲಾಗಿದೆ. ಹಲವು ವರ್ಷಗಳಿಂದ ಪರಿಸರ ಮಾಲಿನ್ಯದ ಆರೋಪ ಈ ಕಾರ್ಖಾನೆ ವಿರುದ್ಧ ಕೇಳಿ ಬರುತ್ತಿತ್ತು. ಸಾರ್ವನಿಕರ ವ್ಯಾಪಕ ದೂರಿನ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ತಹಶೀಲ್ದಾರ್ ಪ್ರತಿಭಾ ಅವರು ಮುಟ್ಟುಗೋಲು ಹಾಕಿದ್ದಾರೆ.
ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಈ ಕಾರ್ಖಾನೆ ಕೈಗೊಂಡಿಲ್ಲ. ಅತಿಯಾದ ದುರ್ನಾತ ಬೀರಿ ಗ್ರಾಮಸ್ಥರಿಗೆ ನಿತ್ಯ ನರಕಯಾತನೆ ಆಗಿತ್ತು. ಈ ಹಿನ್ನೆಲೆಯಲ್ಲಿ ಪರಿಸರ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲು ಶಿಫಾರಸು ಮಾಡಲಾಗಿತ್ತು. ಕಾರ್ಖಾನೆಯನ್ನು ಪರಿಶೀಲಿಸಿ ಅವ್ಯವಸ್ಥೆಯನ್ನು ಮನಗಂಡ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತವಕ್ಕಲ್ ಫಿಶ್ ಫ್ಯಾಕ್ಟರಿಯನ್ನು ಮುಟ್ಟುಗೋಲು ಹಾಕಲು ಆದೇಶ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪರಿಸರ ವಿರೋಧಿಯಾಗಿ ಕಾರ್ಯಾಚರಿಸುತ್ತಿರುವ ಕಾರ್ಖಾನೆಗಳಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ಪ್ರತಿಭಾ ಇದೀಗ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಇದೀಗ ಪುರಸಭಾ ವ್ಯಾಪ್ತಿಯ ಪಡು ಗ್ರಾಮದ ಜನತೆ ನಿರಾಳರಾಗಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…