ಕಾಪು: ಪಾಂಗಾಳದ ಒಂದೇ ಮನೆಯ ಕೊಟ್ಟಿಗೆಯಲ್ಲಿ ಅವಿತುಕೊಂಡಿದ್ದ ಮೂರು ಹೆಬ್ಬಾವುಗಳನ್ನು ಶಿವಾನಂದ ಪೂಜಾರಿ (ಮುನ್ನಾ ಕಾಪು) ನೇತೃತ್ವದ ತಂಡ ಗುರುವಾರ ಸಂಜೆ ಸೆರೆ ಹಿಡಿದು, ರಕ್ಷಿಸಿರುವ ಘಟನೆ ಗುರುವಾರ ನಡೆದಿದೆ.
ಪಾಂಗಾಳ ಗುಡ್ಡೆ ನಿವಾಸಿ ಆಲ್ವಿನ್ ಪ್ರಕಾಶ್ ಎಂಬವರ ಮನೆಯ ದನದ ಹಟ್ಟಿಯಲ್ಲಿ ಹೆಬ್ಬಾವು ಇರುವುದನ್ನು ಗಮನಿಸಿದ ಮನೆಯವರು ಈ ಬಗ್ಗೆ ಹಾವು ಹಿಡಿಯುವುದರಲ್ಲಿ ನಿಸ್ಸೀಮರಾಗಿರುವ ಶಿವಾನಂದ್ ಕಾಪು ಅವರಿಗೆ ಮಾಹಿತಿ ನೀಡಿದ್ದರು.
ಆ ಕೂಡಲೇ ಸ್ಥಳಕ್ಕಾಗಮಿಸಿ ಹೆಬ್ಬಾವುಗಳನ್ನು ಹಿಡಿದು ರಕ್ಷಿಸಿ ಅರಣ್ಯ ಇಲಾಖೆಯ ಸುಪರ್ದಿಗೆ ಒಪ್ಪಿಸಲಾಯಿತು.ಈ ಸಂಧರ್ಭದಲ್ಲಿ ರವಿ ಬಿಂದಾಸ್,ಮಾದವ ಪೂಜಾರಿ,ಉಮೇಶ್ ಮೊದಲಾದವರು ಸಹಕರಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…