ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ವಿಚಾರಕ್ಕೆ ಸಂಬಂಧಿಸಿ ಬಿರುಸಿನ ತನಿಖೆಯ ವೇಳೆ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಆರೋಪಿಗಳ ಬೆನ್ನತ್ತಿ ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಕಳೆದ ರವಿವಾರ ಸಂಜೆ ಶರತ್ ಶೆಟ್ಟಿ ಅವರನ್ನು ಪಾಂಗಾಳದ ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿತ್ತು. ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು.
ಹತ್ಯೆಗೆ ಸಂಬಂಧಿಸಿ ಸಂಶಯದ ಮೇರೆಗೆ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರಿಗೆ ಮಹತ್ವದ ವಿಚಾರಗಳು ದೊರಕಿವೆಯಾದರೂ ಅದನ್ನು ಇನ್ನೂ ಧೃಡಪಡಿಸಿಲ್ಲ. ಪ್ರಮುಖ ಆರೋಪಿಗಳ ಬೆನ್ನತ್ತಿರುವ ಪೊಲೀಸರಿಗೆ ಹತ್ಯೆಯ ಹಿಂದೆ ಹೊರಗಿನ ವ್ಯಕ್ತಿಗಳ ಕೈವಾಡ ಇರುವ ಬಗ್ಗೆಯೂ ಸುಳಿವು ಲಭ್ಯವಾಗಿದ್ದು ಆ ಆಯಾಮದಲ್ಲೂ ತನಿಖೆಯನ್ನು ಮುಂದುವರಿಸಿದ್ದಾರೆ.
ಉಡುಪಿ ಎಸ್ಪಿ, ಅಡಿಷನಲ್ ಎಸ್ಪಿ, ಕಾರ್ಕಳ ಡಿವೈಎಸ್ಪಿ ಸಹಿತ ಮೇಲಧಿಕಾರಿಗಳು ಕಾಪು ವೃತ್ತ ನಿರೀಕ್ಷಕರ ಕಛೇರಿಗೆ ಪದೇ ಪದೇ ಭೇಟಿ ನೀಡುತ್ತಿದ್ದು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ಹತ್ಯೆಯ ಹಿಂದಿನ ಸಂಪೂರ್ಣ ಚಿತ್ರಣ ಹೊರ ಬೀಳುವ ಸಾಧ್ಯತೆಗಳಿವೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…