Featured

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ ? Vishwanews24

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ

ಕಾಪು : ಪಾಂಗಾಳ ಶರತ್‌ ಶೆಟ್ಟಿ ಕೊಲೆ ವಿಚಾರಕ್ಕೆ ಸಂಬಂಧಿಸಿ ಬಿರುಸಿನ ತನಿಖೆಯ ವೇಳೆ ಪೊಲೀಸರಿಗೆ ಮಹತ್ವದ ಮಾಹಿತಿಗಳು ಲಭ್ಯವಾಗಿದ್ದು ಆರೋಪಿಗಳ ಬೆನ್ನತ್ತಿ ತೀವ್ರ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಳೆದ ರವಿವಾರ ಸಂಜೆ ಶರತ್‌ ಶೆಟ್ಟಿ ಅವರನ್ನು ಪಾಂಗಾಳದ ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿತ್ತು. ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್‌ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು.

ಹತ್ಯೆಗೆ ಸಂಬಂಧಿಸಿ ಸಂಶಯದ ಮೇರೆಗೆ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರಿಗೆ ಮಹತ್ವದ ವಿಚಾರಗಳು ದೊರಕಿವೆಯಾದರೂ ಅದನ್ನು ಇನ್ನೂ ಧೃಡಪಡಿಸಿಲ್ಲ. ಪ್ರಮುಖ ಆರೋಪಿಗಳ ಬೆನ್ನತ್ತಿರುವ ಪೊಲೀಸರಿಗೆ ಹತ್ಯೆಯ ಹಿಂದೆ ಹೊರಗಿನ ವ್ಯಕ್ತಿಗಳ ಕೈವಾಡ ಇರುವ ಬಗ್ಗೆಯೂ ಸುಳಿವು ಲಭ್ಯವಾಗಿದ್ದು ಆ ಆಯಾಮದಲ್ಲೂ ತನಿಖೆಯನ್ನು ಮುಂದುವರಿಸಿದ್ದಾರೆ.

ಉಡುಪಿ ಎಸ್ಪಿ, ಅಡಿಷನಲ್‌ ಎಸ್ಪಿ, ಕಾರ್ಕಳ ಡಿವೈಎಸ್ಪಿ ಸಹಿತ ಮೇಲಧಿಕಾರಿಗಳು ಕಾಪು ವೃತ್ತ ನಿರೀಕ್ಷಕರ ಕಛೇರಿಗೆ ಪದೇ ಪದೇ ಭೇಟಿ ನೀಡುತ್ತಿದ್ದು ವೃತ್ತ ನಿರೀಕ್ಷಕ ಕೆ. ಸಿ. ಪೂವಯ್ಯ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮುಂದಿನ ಒಂದೆರಡು ದಿನಗಳಲ್ಲಿ ಹತ್ಯೆಯ ಹಿಂದಿನ ಸಂಪೂರ್ಣ ಚಿತ್ರಣ ಹೊರ ಬೀಳುವ ಸಾಧ್ಯತೆಗಳಿವೆ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

12 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

12 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

12 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago