ಕಾಪು: ಭಾನುವಾರ ಸಂಜೆ ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದ ಸಿಸಿಟಿ ಫೂಟೇಜ್ ಲಭ್ಯವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮೂವರು ವ್ಯಕ್ತಿಗಳು ಕೈಯಲ್ಲಿ ಲಾಂಗ್ ಹಿಡಿದು ಬೈಕ್ನಲ್ಲಿ ತೆರಳುತ್ತಿರುವ ದೃಶ್ಯ ಸೆರೆಯಾಗಿದ್ದು ಇದನ್ನಾಧರಿಸಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದ ಶರತ್ ಶೆಟ್ಟಿಯವರನ್ನು ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿದ್ದಾಗ ಫೋನ್ ಕರೆ ಮಾಡಿ
ಕರೆಸಿಕೊಳ್ಳಲಾಗಿತ್ತು. ಮೊಬೈಲ್ ಕರೆ ಬಂದ ಹಿನ್ನಲೆಯಲ್ಲಿ ಅವರು ರಾಷ್ಟ್ರೀಯ ಹೆದ್ದಾರಿ ಬಳಿ ಬಂದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಕ್ತ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶರತ್ ಅವರ ಎದೆಯ ಭಾಗಕ್ಕೆ ಬಲವಾಗಿ ಚೂರಿ ಹಾಕಿದ್ದ ಹಿನ್ನಲೆಯಲ್ಲಿ ಶರತ್ ಶೆಟ್ಟಿ ಸಾವನ್ನಪ್ಪಿದ್ದರು.
ಇದೀಗ ಕೊಲೆಯ ಬಳಿಕ ಸ್ಥಳದ ಅಕ್ಕಪಕ್ಕದಲ್ಲಿರುವ ಸಿಸಿ ಟಿವಿ ಫೂಟೇಜ್ ನ್ನು ಪೊಲೀಸರು ಸಂಗ್ರಹಿಸಿದ್ದಾರೆ. ತನಿಖೆಗಾಗಿ ಕಾರ್ಕಳ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದೆ.
ಶರತ್ ಶೆಟ್ಟಿ, ಭೂ ವ್ಯವಹಾರ ನಡೆಸುತ್ತಿದ್ದ ಕಾರಣ, ಕಮಿಷನ್ ಹಣದ ವಿಚಾರದಲ್ಲಿ ಕೊಲೆಯಾಗಿರಬಹುದೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…