Featured

ಕಾಪು : ‘ಪಾದೂರು ಉಳಿಸಿ’ ಹೋರಾಟ ರಾಜಕೀಯ ಪ್ರೇರಿತ: ಬಿಜೆಪಿ ಆರೋಪ – vishwanews24

ಕಾಪು : ‘ಪಾದೂರು ಉಳಿಸಿ’ ಹೋರಾಟ ರಾಜಕೀಯ ಪ್ರೇರಿತ: ಬಿಜೆಪಿ ಆರೋಪ

ಕಾಪು : ಪಾದೂರಿನಲ್ಲಿರುವ ಭೂಗತ ತೈಲಾಗಾರದ ಎರಡನೇ ಹಂತದ ವಿಸ್ತರಣೆ ಮತ್ತು ಗುತ್ತಿಗೆ ವಹಿಸಿಕೊಂಡಿರುವ ಮೇಘಾ ಎಂಜಿನಿಯರಿಂಗ್ ಕಂಪೆನಿಯ ವಿರುದ್ಧ ಮಾಜಿ ಸಚಿವ ವಿನಯ್‌ ಕುಮಾರ್ ಸೊರಕೆ ನೇತೃತ್ವದಲ್ಲಿ ಪಾದೂರು ಉಳಿಸಿ ಪರಿಸರ ರಕ್ಷಿಸಿ ಹೋರಾಟ ಸಮಿತಿ ನಡೆಸಿದ ಪ್ರತಿಭಟನೆ ಸಂಪೂರ್ಣ ರಾಜಕೀಯ ಆಧಾರಿತ ಎಂದು ಮಜೂರು ಗ್ರಾ.ಪಂ.ನ ನಿಕಟಪೂರ್ವ ಬಿಜೆಪಿ ಬೆಂಬಲಿತ ಸದಸ್ಯರು ಆರೋಪಿಸಿದರು.

ಮಜೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸಂದೀಪ್ ರಾವ್ – ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರಂಭದಿಂದಲೂ ಗ್ರಾಮಸ್ಥರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿ, ಸಮಸ್ಯೆ ಪರಿಹರಿಸುವಲ್ಲಿ ಗ್ರಾ.ಪಂ. ಪ್ರಾಮಾಣಿಕ ಪ್ರಯತ್ನ ನಡೆಸಿದೆ. ಆದರೂ ವಿನಾ ಕಾರಣ ಗ್ರಾ.ಪಂ. ವಿರುದ್ಧ ಆರೋಪ ಮಾಡುತ್ತಿರುವ ಸೊರಕೆ ಅವರು ಪ್ರತಿಭಟನೆಯ ಬೀದಿ ನಾಟಕ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದರು.

ಮಾಜಿ ಶಾಸಕ – ಲಾಲಾಜಿ ಆರ್. ಮೆಂಡನ್, ಸಂಸದರಾಗಿದ್ದ ಶೋಭಾ ಕರಂದ್ಲಾಜೆ ಮತ್ತು ಹಾಲಿ ಶಾಸಕ ಗುರ್ಮ ಸುರೇಶ್ ಶೆಟ್ಟಿ ಅವರ ಮುತುವರ್ಜಿಯಲ್ಲಿ ಸ್ಥಳೀಯ ಜನಜಾಗೃತಿ ಹಾಗೂ ಜನಹಿತ ಸಮಿತಿ ಜತೆ  ಸೇರಿಕೊಂಡು ಗ್ರಾಮಸ್ಥರಿಗಾಗುವ ತೊಂದರೆಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಕೇವಲ ಪಕ್ಷದ ಬೆಂಬಲಿಗರಿಗೆ ಗುತ್ತಿಗೆದಾರಿಕೆ ಸಿಕ್ಕಿಲ್ಲವೆಂಬ ಹತಾಶೆಯಿಂದ ಪಾದೂರು ಗ್ರಾಮಸ್ಥರೇ ಇಲ್ಲದ ಸ್ವಯಂ ಘೋಷಿತ ಸಮಿತಿಯನ್ನು ಕಟ್ಟಿಕೊಂಡು ನಡೆಸಿರುವ ಹೋರಾಟ ಅರ್ಥವಿಲ್ಲದ್ದು ಎಂದರು.

ತೆರಿಗೆ ಬಾಕಿಯಿರಿಸಿದ ಕಂಪೆನಿಯ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಿ 3 ಕೋ.ರೂ. ವರೆಗೆ ತೆರಿಗೆ ಹಣವನ್ನು ವಸೂಲು ಮಾಡಿ ಅಭಿವೃದ್ಧಿ ಕಾರ್ಯಕ್ಕೆ ವಿನಿಯೋಗಿಸಲಾಗಿದೆ ಎಂದರು.

ಪ್ರಮಾಣಕ್ಕೆ ಆಹ್ವಾನ

ಕಾಪು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಅವರ ಪುತ್ರನ ವಿರುದ್ಧ ಕಲ್ಲಿನ ವ್ಯವಹಾರ ಮಾಡುತ್ತಿದ್ದಾರೆಂಬ ಸುಳ್ಳು ಆರೋಪ ಮಾಡಿರುವ ಬೈರಂಪಳ್ಳಿ ಸಂತೋಷ್ ಹಾಗೂ ವಿನಯ್‌ ಕುಮಾರ್ ಸೊರಕೆ ಅವರು 24 ಗಂಟೆಯೊಳಗೆ ದಾಖಲೆಗಳೊಂದಿಗೆ ಆರೋಪ ಸಾಬೀತು ಮಾಡಬೇಕು. ಇಲ್ಲದಿದ್ದಲ್ಲಿ ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಅಥವಾ ಅವರು ನಂಬುವ ಯಾವುದೇ ದೇವಸ್ಥಾನಕ್ಕೆ ಬಂದು ಆರೋಪ ಹೌದು ಎಂದು ಪ್ರಮಾಣ ಮಾಡಲಿ, ಇದಕ್ಕೆ ಶಾಸಕರನ್ನು ಕರೆತರುವ ಜವಾಬ್ದಾರಿ ನಮ್ಮದಾಗಿದೆ ಎಂದು ಸವಾಲು ಹಾಕಿದರು. ಮಜೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಮಾಜಿ ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಮಾಜಿ ಉಪಾಧ್ಯಕ್ಷರಾದ ಮಧುಸೂದನ ಸಾಲ್ಯಾನ್, ಮಂಜುಳಾ ಆಚಾರ್ಯ, ಸಹನಾ ತಂತ್ರಿ, ಮಾಜಿ ಸದಸ್ಯೆ ವನಿತಾ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago