Featured

ಕಾಪು: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರಿಂದ ತಡೆ – vishwanews24

ಕಾಪು: ಪಾದೂರು ಜಲ್ಲಿ ಕ್ರಷರ್ ನಿರ್ಮಾಣದ ಜಂಟಿ ಸರ್ವೇಗೆ ಬಂದ ಅಧಿಕಾರಿಗಳನ್ನು  ಹಿಮ್ಮೆಟ್ಟಿಸಿದ ಗ್ರಾಮಸ್ಥರು

ಕಾಪು: ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಐಎಸ್‌ಪಿಆರ್‌ಲ್‌ ಯೋಜನಾ ಪುದೇಶದೊಳಗೆ ನಿರ್ಮಿಸಲು ಉದ್ದೇಶಿಸಿರುವ ಪಾದೂರು ಜಲ್ಲಿ ಕಷರ್‌ಗೆ ಜಮೀನು ನೀಡುವ ಬಗ್ಗೆ ಜಂಟಿ ಸರ್ವೇಗೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ಬುಧವಾರ ಹಿಮ್ಮೆಟ್ಟಿಸಿದ್ದಾರೆ.

ಐಎಸ್‌ಪಿಆರ್‌ಎಲ್ ಯೋಜನಾ ಪ್ರದೇಶದೊಳಗೆ ಸಂಗ್ರಹಗೊಂಡಿರುವ ಬಂಡೆ ಕಲ್ಲುಗಳನ್ನು ತೆರವುಗೊಳಿಸುವುದಕ್ಕಾಗಿ ಯೋಜನಾ ಪ್ರದೇಶದೊಳಗೆ ಜಲ್ಲಿ ಕ್ರಷರ್ ನಿರ್ಮಾಣ ಮಾಡುವ ಬಗ್ಗೆ ಮಜೂರು ಗ್ರಾಪಂಗೆ ಮಾಹಿತಿ ಸಿಕ್ಕಿತ್ತು. ಇದನ್ನು ವಿರೋಧಿಸಿ ಮಜೂರು ಗ್ರಾಪಂ ಗ್ರಾಮಸ್ಥರನ್ನು ಸೇರಿಸಿಕೊಂಡು ಜನಾಭಿಪ್ರಾಯ ಸಭೆ ನಡೆಸಿದ್ದು ಅಲ್ಲಿ ಗ್ರಾಮಸ್ವರ ಬೇಡಿಕೆಯಂತೆ ಜಲ್ಲಿ ಕ್ರಷರ್ ಸ್ಕ್ಯಾಪನೆಗೆ ವಿರೋಧ ವ್ಯಕ್ತ ಪಡಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ಸಭೆಗೆ ಆಗಮಿಸಿದ್ದ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ಅವರಿಗೂ ಮನವರಿಕೆ ಮಾಡಿಕೊಡಲಾಗಿತ್ತು.
ಈ ನಡುವೆಯೇ ಬುಧವಾರ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ನೇತೃತ್ವದ ಅಧಿಕಾರಿಗಳ ತಂಡ ಏಕಾಏಕಿಯಾಗಿ ಐಎಸ್‌ಪಿಆರ್‌ಲ್ ಪರಿಸರದಲ್ಲಿ ಜಂಟಿ ಸರ್ವೇಗಾಗಿ ಬಂದಿದ್ದು, ಇದನ್ನು ತಿಳಿಯುತ್ತಿದ್ದಂತೆಯೇ ಸ್ಥಳೀಯರು ಗ್ರಾಮ ಪಂಚಾಯತ್‌ಗೆ ಮಾಹಿತಿ ನೀಡಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಜೂರು ಗ್ರಾ.ಪಂ. ಅಧ್ಯಕ್ಷ ಪುಸಾದ್‌ ಶೆಟ್ಟಿ ವಳದೂರು, ಗ್ರಾ.ಪಂ. ಸದಸ್ಯರು, ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್‌ ಶೆಟ್ಟಿ ಪಾದೂರು ಸೇರಿದಂತೆ ಸ್ಥಳೀಯರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡಕ್ಕೆ ವಿರೋಧ ವ್ಯಕ್ತ ಪಡಿಸಿ, ಗ್ರಾ.ಪಂ. ಮಂಡಿಸಿದ ನಿರ್ಣಯದ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿದರು.

ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಜಂಟಿ ಸರ್ವೇಗಾಗಿ ಬಂದಿದ್ದು, ಜನರ ವಿರೋಧದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜನರ ಒತ್ತಾಯಕ್ಕೆ ಮಣಿದು ಬರಿಗೈಯಲ್ಲಿಯೇ ಹಿಂದಿರುಗಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago