ಕಾಪು: ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಐಎಸ್ಪಿಆರ್ಲ್ ಯೋಜನಾ ಪುದೇಶದೊಳಗೆ ನಿರ್ಮಿಸಲು ಉದ್ದೇಶಿಸಿರುವ ಪಾದೂರು ಜಲ್ಲಿ ಕಷರ್ಗೆ ಜಮೀನು ನೀಡುವ ಬಗ್ಗೆ ಜಂಟಿ ಸರ್ವೇಗೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ಬುಧವಾರ ಹಿಮ್ಮೆಟ್ಟಿಸಿದ್ದಾರೆ.
ಐಎಸ್ಪಿಆರ್ಎಲ್ ಯೋಜನಾ ಪ್ರದೇಶದೊಳಗೆ ಸಂಗ್ರಹಗೊಂಡಿರುವ ಬಂಡೆ ಕಲ್ಲುಗಳನ್ನು ತೆರವುಗೊಳಿಸುವುದಕ್ಕಾಗಿ ಯೋಜನಾ ಪ್ರದೇಶದೊಳಗೆ ಜಲ್ಲಿ ಕ್ರಷರ್ ನಿರ್ಮಾಣ ಮಾಡುವ ಬಗ್ಗೆ ಮಜೂರು ಗ್ರಾಪಂಗೆ ಮಾಹಿತಿ ಸಿಕ್ಕಿತ್ತು. ಇದನ್ನು ವಿರೋಧಿಸಿ ಮಜೂರು ಗ್ರಾಪಂ ಗ್ರಾಮಸ್ಥರನ್ನು ಸೇರಿಸಿಕೊಂಡು ಜನಾಭಿಪ್ರಾಯ ಸಭೆ ನಡೆಸಿದ್ದು ಅಲ್ಲಿ ಗ್ರಾಮಸ್ವರ ಬೇಡಿಕೆಯಂತೆ ಜಲ್ಲಿ ಕ್ರಷರ್ ಸ್ಕ್ಯಾಪನೆಗೆ ವಿರೋಧ ವ್ಯಕ್ತ ಪಡಿಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ಸಭೆಗೆ ಆಗಮಿಸಿದ್ದ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ಅವರಿಗೂ ಮನವರಿಕೆ ಮಾಡಿಕೊಡಲಾಗಿತ್ತು.
ಈ ನಡುವೆಯೇ ಬುಧವಾರ ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಶ್ವಿನಿ ನೇತೃತ್ವದ ಅಧಿಕಾರಿಗಳ ತಂಡ ಏಕಾಏಕಿಯಾಗಿ ಐಎಸ್ಪಿಆರ್ಲ್ ಪರಿಸರದಲ್ಲಿ ಜಂಟಿ ಸರ್ವೇಗಾಗಿ ಬಂದಿದ್ದು, ಇದನ್ನು ತಿಳಿಯುತ್ತಿದ್ದಂತೆಯೇ ಸ್ಥಳೀಯರು ಗ್ರಾಮ ಪಂಚಾಯತ್ಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಮಜೂರು ಗ್ರಾ.ಪಂ. ಅಧ್ಯಕ್ಷ ಪುಸಾದ್ ಶೆಟ್ಟಿ ವಳದೂರು, ಗ್ರಾ.ಪಂ. ಸದಸ್ಯರು, ಜನಜಾಗೃತಿ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು ಸೇರಿದಂತೆ ಸ್ಥಳೀಯರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡಕ್ಕೆ ವಿರೋಧ ವ್ಯಕ್ತ ಪಡಿಸಿ, ಗ್ರಾ.ಪಂ. ಮಂಡಿಸಿದ ನಿರ್ಣಯದ ಪ್ರತಿಯನ್ನು ಅಧಿಕಾರಿಗಳಿಗೆ ನೀಡಿದರು.
ಉಡುಪಿ ಜಿಲ್ಲಾಧಿಕಾರಿಯವರ ಆದೇಶದಂತೆ ಜಂಟಿ ಸರ್ವೇಗಾಗಿ ಬಂದಿದ್ದು, ಜನರ ವಿರೋಧದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜನರ ಒತ್ತಾಯಕ್ಕೆ ಮಣಿದು ಬರಿಗೈಯಲ್ಲಿಯೇ ಹಿಂದಿರುಗಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…