ಕಾಪು : ಮಜೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾದೂರು ಮತ್ತು ಹೇರೂರು ಪರಿಸರದಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ತೀವು ಆತಂಕಿತರಾಗಿದ್ದಾರೆ.
ಪಾದೂರು ಐಎಸ್ಪಿಆಎಲ್, ಸಿಎಸ್ಐ ಚರ್ಚ್, ಹೇರೂರು ಮತ್ತು ವಳದೂರುದಲ್ಲಿ ಚಿರತೆ ಓಡಾಡುತ್ತಿದ್ದು ಈ ಪರಿಸರದಲ್ಲಿ ಜನ ಓಡಾಡಲು ಹೆದರುವಂತಾಗಿದೆ. ಸೋಮವಾರ ರಾತ್ರಿ ಪಾದೂರು ಚರ್ಚ್ ಹಿಂಬದಿಯಲ್ಲಿರುವ ವಯೋವೃದ ಜಾರ್ಜ್ ಬಂಗೇರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು. ಭಯದಿಂದಲೇ ಮನೆಯವರು ರಾತ್ರಿಯಿಡೀ ನಿದ್ರೆ ಬಿಟ್ಟು ಎಚ್ಚರದಿಂದಲೇ ಕುಳಿತುಕೊಳ್ಳುವಂತಾಗಿತ್ತು.
ಬುಧವಾರ ಬೆಳಿಗೆ ಹೇರೂರು ನಿವಾಸಿ ವಿದ್ಯಾ ಪ್ರಭು ಅವರು ಹೂವು ಕೊಯ್ಯುತ್ತಿದ್ದಾಗ ಚಿರತೆ ಗುಟುರು ಹಾಕಿದ್ದು ತತ್ಕ್ಷಣ ಓಡಿ ತಪ್ಪಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಗ್ರಾಮಸ್ಥರು ಭಯಭೀತಿಯಿಂದ ಬದುಕಬೇಕಾಗಿದೆ. ಎನ್ನುತ್ತಾರೆ ಸ್ಥಳೀಯರು. ಪಾದೂರು, ಕೂರಾಲು, ವಳದೂರು, ಹೇರೂರು ಪರಿಸರದಲ್ಲಿ ಚಿರತೆ ಹಾವಳಿಯನ್ನು ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ. ಕಾಪು ತಾಲೂಕು ವ್ಯಾಪ್ತಿಯಲ್ಲಿ ಒಂದೇ ಬೋನು ಇದ್ದು ಸಮಸ್ಯೆ ಉಂಟಾಗಿದೆ.
ಸದ್ಯ ಕುರ್ಕಾಲು ಪರಿಸರದಲ್ಲಿ ಇರಿಸಲಾಗಿದ್ದ ಬೋನನ್ನು ಬುಧವಾರ ಸಂಜೆ ಪಾದೂರು-ಹೇರೂರು ಪರಿಸರದಲ್ಲಿ ತಂದು ಇರಿಸಲಾಗಿದೆ ಎಂದು ಮಜೂರು ಗ್ರಾಮ ಪಂಚಾಯತಿ ಅಧ್ಯಕ್ಷ ಪುಸಾದ್ ಶೆಟ್ಟಿ ವಳದೂರು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…