Featured

ಕಾಪು: ಪಿಡಬ್ಲ್ಯುಡಿ ಜಿಲ್ಲಾ ಮುಖ್ಯ ರಸ್ತೆ ಅಂಚಿನಿಂದ ಕಟ್ಟಡ ರೇಖೆ ಅಂತರ 6 ಮೀ.ಗೆ ನಿಗದಿಪಡಿಸಿ : ಸರಕಾರ ಆದೇಶ – vishwanews24

ಕಾಪು:  ಕಟ್ಟಡ ರೇಖೆ ಅಂತರ ಪರಿಷ್ಕರಣೆ: 6 ಮೀ.ಗೆ ನಿಗದಿಪಡಿಸಿ ಸರಕಾರ ಆದೇಶ ; ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ

ಕಾಪು: ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರದ ವಿಷಯವಾಗಿ ಹಿಂದಿನ ಆದೇಶವನ್ನು ಪರಿಷ್ಕರಿಸಿ 6 ಮೀ.ಗೆ ಸರಕಾರ ನಿಗದಿಗೊಳಿಸಿದೆ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ 6 ಮೀ. ಆಗಿದ್ದು, ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೆ 25 ಮೀ. ನಿಗದಿಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲು ಕಷ್ಟ ಸಾಧ್ಯವಾಗಿತ್ತು.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು 2024ರ ಡಿ. 2ರಂದು ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ರಾಜ್ಯ ಹೆದ್ದಾರಿಗಳಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೂ ಭೂ ಗಡಿ ಅಂಚಿನಿಂದ 6 ಮೀ. ಅಂತರದಲ್ಲಿ ಕಟ್ಟಡ ನಿಯಂತ್ರಣ ರೇಖೆಯನ್ನು ನಿಗದಿಪಡಿಸುವಂತೆ ಕೋರಿದ್ದರು. ಅದರಂತೆ ಸರಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಸರಕಾರದ ಈ ನಿರ್ಧಾರವನ್ನು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸ್ವಾಗತಿಸಿದ್ದಾರೆ.

ಈ ವಿಷಯವನ್ನು ಪರಿಶೀಲನೆ ನಡೆಸಿದ ರಾಜ್ಯ ಸರಕಾರವು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಅವರ ಮೂಲಕ ಫೆ. 17ರಂದು ಸುತ್ತೋಲೆ ಹೊರಡಿಸಿದೆ.

2024ರ ಅ. 10ರಂದು ಹೊರಡಿಸಿದ್ದ ಹಿಂದಿನ ಆದೇಶವನ್ನು ಪರಿಷ್ಕರಿಸಿ ಭೂ ಗಡಿಯ ಅಂಚಿನಿಂದ ಕಟ್ಟಡದ ರೇಖೆಯ ಪರಿಮಿತಿಯನ್ನು 6ಮೀ ನಿಗದಿಪಡಿಸಿರುವುದ ಆದೇಶವನ್ನು ರಾಜ್ಯ ಹೆದ್ದಾರಿಗಳ ಜತೆಗೆ ಲೊಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೂ ವಿಸ್ತರಿಸಿರುವುದಾಗಿ ತಿಳಿಸಿದೆ.

ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ನ ಪ್ರತೀ ಗ್ರಾಮ ಠಾಣಾ ಪರಿಮಿತಿಗೂ ಈ ಆದೇಶ ಅನ್ವಯಿಸಲಿದೆ. ಅದರ ಜತೆಗೆ ಸಿಟಿ ಕಾರ್ಪೋರೇಶನ್‌ ಪರಿಮಿತಿಯಿಂದ 15 ಕಿ. ಮೀ. ದೂರದವರೆಗೆ 12 ಮೀಟರ್‌ ವರೆಗೆ ಪರಿಷ್ಕರಿಸಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

39 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

50 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

57 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago