Featured

ಕಾಪು: ಪಿಡಬ್ಲ್ಯುಡಿ ಜಿಲ್ಲಾ ಮುಖ್ಯ ರಸ್ತೆ ಅಂಚಿನಿಂದ ಕಟ್ಟಡ ರೇಖೆ ಅಂತರ 6 ಮೀ.ಗೆ ನಿಗದಿಪಡಿಸಿ : ಸರಕಾರ ಆದೇಶ – vishwanews24

ಕಾಪು:  ಕಟ್ಟಡ ರೇಖೆ ಅಂತರ ಪರಿಷ್ಕರಣೆ: 6 ಮೀ.ಗೆ ನಿಗದಿಪಡಿಸಿ ಸರಕಾರ ಆದೇಶ ; ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ

ಕಾಪು: ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರದ ವಿಷಯವಾಗಿ ಹಿಂದಿನ ಆದೇಶವನ್ನು ಪರಿಷ್ಕರಿಸಿ 6 ಮೀ.ಗೆ ಸರಕಾರ ನಿಗದಿಗೊಳಿಸಿದೆ.

ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರ 6 ಮೀ. ಆಗಿದ್ದು, ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೆ 25 ಮೀ. ನಿಗದಿಗೊಳಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡವನ್ನು ನಿರ್ಮಿಸಲು ಕಷ್ಟ ಸಾಧ್ಯವಾಗಿತ್ತು.

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು 2024ರ ಡಿ. 2ರಂದು ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ರಾಜ್ಯ ಹೆದ್ದಾರಿಗಳಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೂ ಭೂ ಗಡಿ ಅಂಚಿನಿಂದ 6 ಮೀ. ಅಂತರದಲ್ಲಿ ಕಟ್ಟಡ ನಿಯಂತ್ರಣ ರೇಖೆಯನ್ನು ನಿಗದಿಪಡಿಸುವಂತೆ ಕೋರಿದ್ದರು. ಅದರಂತೆ ಸರಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಸರಕಾರದ ಈ ನಿರ್ಧಾರವನ್ನು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಸ್ವಾಗತಿಸಿದ್ದಾರೆ.

ಈ ವಿಷಯವನ್ನು ಪರಿಶೀಲನೆ ನಡೆಸಿದ ರಾಜ್ಯ ಸರಕಾರವು ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಅವರ ಮೂಲಕ ಫೆ. 17ರಂದು ಸುತ್ತೋಲೆ ಹೊರಡಿಸಿದೆ.

2024ರ ಅ. 10ರಂದು ಹೊರಡಿಸಿದ್ದ ಹಿಂದಿನ ಆದೇಶವನ್ನು ಪರಿಷ್ಕರಿಸಿ ಭೂ ಗಡಿಯ ಅಂಚಿನಿಂದ ಕಟ್ಟಡದ ರೇಖೆಯ ಪರಿಮಿತಿಯನ್ನು 6ಮೀ ನಿಗದಿಪಡಿಸಿರುವುದ ಆದೇಶವನ್ನು ರಾಜ್ಯ ಹೆದ್ದಾರಿಗಳ ಜತೆಗೆ ಲೊಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳಿಗೂ ವಿಸ್ತರಿಸಿರುವುದಾಗಿ ತಿಳಿಸಿದೆ.

ಪಿಡಬ್ಲ್ಯುಡಿ ವ್ಯಾಪ್ತಿಯ ಎಲ್ಲ ಕಟ್ಟಡಗಳಿಗೆ ಅನ್ವಯ
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಶನ್‌, ಸಿಟಿ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಮುನ್ಸಿಪಲ್‌ ಕೌನ್ಸಿಲ್‌, ಟೌನ್‌ ಪಂಚಾಯತ್‌ ಮತ್ತು ಗ್ರಾಮ ಪಂಚಾಯತ್‌ನ ಪ್ರತೀ ಗ್ರಾಮ ಠಾಣಾ ಪರಿಮಿತಿಗೂ ಈ ಆದೇಶ ಅನ್ವಯಿಸಲಿದೆ. ಅದರ ಜತೆಗೆ ಸಿಟಿ ಕಾರ್ಪೋರೇಶನ್‌ ಪರಿಮಿತಿಯಿಂದ 15 ಕಿ. ಮೀ. ದೂರದವರೆಗೆ 12 ಮೀಟರ್‌ ವರೆಗೆ ಪರಿಷ್ಕರಿಸಿದೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago